Advertisement

28ರಿಂದ ಭೀಮ್‌ ಆರ್ಮಿ ಮುಖ್ಯಸ್ಥರ ರಾಜ್ಯ ಪ್ರವಾಸ

12:10 AM Jan 26, 2020 | Team Udayavani |

ಬೆಂಗಳೂರು: ಭೀಮ್‌ ಆರ್ಮಿ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ್‌ ಆಜಾದ್‌ ರಾವಣ್‌ ಅವರು ಜ.28 ರಿಂದ 30ರವರೆಗೆ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆಂದು ಆರ್ಮಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್‌ ಗೋಪಾಲ್‌ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.28 ರಂದು ಬೆಳಗ್ಗೆ 11 ಗಂಟೆಗೆ ಬೀದರ್‌ನಲ್ಲಿ ಭಾರತದ ಸಂವಿಧಾನದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Advertisement

ಸಂಜೆ 5 ಗಂಟೆಗೆ “ಭೀಮ ಸಂಕಲ್ಪ’ ಸಮಾವೇಶ ಆಯೋಜಿಸಲಾಗಿದೆ. ಜ.29ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನ ಸೆನೆಟ್‌ ಹಾಲ್‌ನಲ್ಲಿ “ಗೌರಿ ನೆನಪು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜ.30ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿಯಲ್ಲಿ ಎನ್‌ಆರ್‌ಸಿ ಕುರಿತು ಚರ್ಚಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next