Advertisement

ಮುಂದಿನ ಒಂದೆರಡು ದಿನಗಳಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಪ್ರವೇಶ

12:29 AM Jun 12, 2022 | Team Udayavani |

ಬೆಂಗಳೂರು: ಮುಂದಿನ ಒಂದೆರಡು ದಿನಗಳಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಪ್ರವೇಶವಾಗುವ ಸಾಧ್ಯತೆಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಉತ್ತಮ ಆರಂಭವಾಗಿಲ್ಲ. ಹಾಗೆಂದು ಮುಂಗಾರು ಮಳೆ ದುರ್ಬಲವಾಗಿದೆ ಎನ್ನಲು ಸಾಧ್ಯ ವಾಗಿಲ್ಲ. ಈಗಷ್ಟೇ ಆರಂಭ ಆಗಿರು ವುದರಿಂದ ಉತ್ತಮ ಮಳೆಯಾಗುವ ಎಲ್ಲ ಲಕ್ಷಣಗಳಿವೆ. ಜೂ.14 ಮತ್ತು 15ರಂದು ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ತಿಳಿಸಿದೆ.

ಎಲ್ಲೋ ಅಲರ್ಟ್‌
ಮಹಾರಾಷ್ಟ್ರ ಕರಾವಳಿ ತೀರದಿಂದ ರಾಜ್ಯದ ಕರಾವಳಿ ತೀರದವರೆಗೂಮೇಲ್ಮೈ ಸುಳಿಗಾಳಿ ಹಾದು ಹೋಗಲಿದ್ದು, ಇದರ ಪರಿಣಾಮ ರವಿವಾರದಿಂದ 5 ದಿನಗಳ ಕಾಲ ಕರಾವಳಿ ಪ್ರದೇಶಗಳಿಗೆ ಎಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next