Advertisement

Shashi Tharoor; ಪಿಎಂ ವಿರುದ್ಧ ಹೇಳಿಕೆ: ತರೂರ್‌ ವಿಚಾರಣೆಗೆ ಸುಪ್ರೀಂ ತಡೆ

11:45 PM Sep 10, 2024 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳ ನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರಿಂ ಕೋರ್ಟ್‌ ತಡೆ ನೀಡಿದೆ.

Advertisement

“ಶಿವಲಿಂಗದ ಮೇಲಿನ ಚೇಳು’ ಎಂಬ ತರೂರ್‌  ಹೇಳಿಕೆ ರಾಜಕೀಯ ನಾಯಕರೊಬ್ಬನ ಕುರಿತು ಉಲ್ಲೇಖೀಸಲಾದ ಉಪಮೆ ಎಂದು ಅಭಿಪ್ರಾಯಪಟ್ಟಿದೆ. 2012ರಲ್ಲಿ ಈ ಉಪಮೆ ನಿಯತಕಾಲಿಕೆಯೊಂದರಲ್ಲಿ ಪ್ರಕಟವಾಗಿದ್ದರೂ ಮಾನನಷ್ಟ ಪ್ರಕರಣ ದಾಖಲಾಗಿರಲಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಈ ಬಗ್ಗೆ ವಿಚಾರಣೆಗೆ ಹಾಜರಾಗಬೇಕು ಎಂದು ದೆಹಲಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ತರೂರ್‌ ಮೇಲ್ಮನವಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next