Advertisement

ರಾಜ್ಯದ 34 ಅಮೃತ ರೈಲು ನಿಲ್ದಾಣ ಇಂದು ಉದ್ಘಾಟನೆ

12:55 AM Feb 26, 2024 | Team Udayavani |

ಬೆಂಗಳೂರು: ಅಮೃತ್‌ ಭಾರತ್‌ ಸ್ಟೇಷನ್‌ ಯೋಜನೆಯಡಿಯಲ್ಲಿ ಅಭಿವೃದ್ಧಿ ಹೊಂದಿದ 34 ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ಸೋಮವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಒಟ್ಟು 801 ಕೋಟಿ ರೂ. ವೆಚ್ಚದಲ್ಲಿ ಈ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗಿದೆ.

Advertisement

ಮೊದಲ ಹಂತದಲ್ಲಿ ರೈಲು ನಿಲ್ದಾಣದ ಪ್ರವೇಶ ದ್ವಾರ ಸುಂದರಗೊಳಿಸುವುದು, ಪ್ರಯಾಣಿಕರ ತಂಗು ನಿಲ್ದಾಣ, ಶೌಚಾಲಯ ಸೌಲಭ್ಯ, ಲಿಫ್ಟ್, ಎಸ್ಕಲೇಟರ್‌ ಸ್ಥಾಪನೆ, ಸ್ವಚ್ಛತೆ, ಉಚಿತ ವೈ-ಫೈ ಹಾಗೂ ಒಂದು ನಿಲ್ದಾಣ ಒಂದು ಉತ್ಪನ್ನದಂಥ ಉಪಕ್ರಮಗಳಡಿ ಸ್ಥಳೀಯ ಉತ್ಪನ್ನಗಳಿಗೆ ಕಿಯೋಸ್ಕ್ ಸ್ಥಾಪಿಸಲಾಗುತ್ತದೆ.

ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದ 7 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಕೂಡ ಪ್ರಧಾನಿ ಇದೇ ಸಂದರ್ಭ ಶಂಕು ಸ್ಥಾಪನೆ ನಡೆಸಲಿದ್ದಾರೆ. ನೈಋತ್ಯ ರೈಲ್ವೇಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ 15 ರೈಲ್ವೇ ನಿಲ್ದಾಣಗಳ ಪುನರಾಭಿವೃದ್ಧಿಗೆ 372.13ಕೋಟಿ ರೂ. ವೆಚ್ಚ ಮಾಡಲಾಗುತ್ತದೆ.

 

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next