Advertisement

ನಾಳೆ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

06:55 AM Mar 09, 2018 | Team Udayavani |

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲೇ ಲೋಕಾಯುಕ್ತ ನ್ಯಾ.ವಿಶ್ವನಾಥ್‌ ಶೆಟ್ಟಿ ಅವರನ್ನು ಕೊಲೆ ಮಾಡಲು ನಡೆಸಿದ ಯತ್ನ ಖಂಡಿಸಿ ನಾಳೆ (ಮಾ.10) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.

Advertisement

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಈಗಾಗಲೇ ಹದಗೆಟ್ಟಿರುವ ರಾಜ್ಯದ ಕಾನೂನು ಸುವ್ಯವಸ್ಥೆ, ಕರ್ನಾಟಕ ಗೂಂಡಾರಾಜ್‌ ಆಗಿ ಪರಿವರ್ತನೆಯಾಗಿರುವುದರ ಜತೆಗೆ ಕ್ರಿಮಿನಲ್‌ಗಳು ಲೋಕಾಯುಕ್ತದಂತಹ ಸಂಸ್ಥೆಗೆ ನುಗ್ಗಿ ಲೋಕಾಯುಕ್ತರನ್ನು ಹತ್ಯೆ ಮಾಡುವಂತಹ ಮಟ್ಟಕ್ಕೆ ಪರಿಸ್ಥಿತಿ ಹದಗೆಟ್ಟಿದೆ. ಇದನ್ನು ವಿರೋಧಿಸಿ ಮಾ.10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಸಭೆಗಳನ್ನು ಆಯೋಜಿಸಲಾಗಿದೆ. ಆ ಮೂಲಕ ಕಾಂಗ್ರೆಸ್‌ ಸರ್ಕಾರದ ಭ್ರಷ್ಟ ಮತ್ತು ಗೂಂಡಾ ಸರ್ಕಾರದ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ ರಾಜ್ಯ
ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next