Advertisement

ಗುಂಡಿನ ದಾಳಿ ಪ್ರಕರಣ; ಆರೋಪಿ ಪರ ಹೇಳಿಕೆ ಬೇಡ, ವಿವಾದದಿಂದ ದೂರ ಇರಿ: ಬಿಜೆಪಿ

01:32 PM Oct 19, 2020 | Team Udayavani |

ನವದೆಹಲಿ: ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ನೀಡಿದ್ದ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟ ಹಿನ್ನೆಲೆಯಲ್ಲಿ ಬಲ್ಲಿಯಾ ಘಟನೆಗೆ ಸಂಬಂಧಿಸಿದಂತೆ ಪಕ್ಷದ ಯಾವುದೇ ಮುಖಂಡರು ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದೆ.

Advertisement

ಈ ಘಟನೆ ಕುರಿತು ಬಿಜೆಪಿ ಮುಖಂಡರು ಅಂತರ ಕಾಯ್ದುಕೊಳ್ಳುವುದು ಒಳಿತು. ಆರೋಪಿ ಪರ ಹೇಳಿಕೆ ನೀಡುವುದು ಬೇಡ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.

ಎಎನ್ ಐ ವರದಿ ಪ್ರಕಾರ, ಬಲ್ಲಿಯಾ ಘಟನೆ ಬಗ್ಗೆ ಶಾಸಕ ಸುರೇಂದ್ರ ಸಿಂಗ್ ನೀಡಿರುವ ಹೇಳಿಕೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿಸಿದೆ.

ಬಲ್ಲಿಯಾ ಗುಂಡಿನ ದಾಳಿ ಕುರಿತಂತೆ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅಂತರ ಕಾಯ್ದುಕೊಂಡು ಇನ್ಮುಂದೆ ಯಾವುದೇ ಹೇಳಿಕೆ ನೀಡದಂತೆ ಸ್ವತಂತ್ರದೇವ್ ಸಿಂಗ್ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಉತ್ತರ ಕರ್ನಾಟದ ನೆರೆ ಸಂತೃಸ್ಥರಿಗೆ ಅಗತ್ಯ ನೆರವು: ಪ್ರಧಾನಿ ಮೋದಿ ಭರವಸೆ

Advertisement

ಬಲ್ಲಿಯಾ ಶೂಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿಯನ್ನು ಬಂಧಿಸಲಾಗಿದೆ. ಅಕ್ಟೋಬರ್ 16ರಂದು ಪಡಿತರ ಅಂಗಡಿಗಳನ್ನು ಅಧಿಕಾರಿಗಳ ಸುಪರ್ದಿಗೆ ವಹಿಸುವ ಕಾರ್ಯಕ್ರಮವೊಂದರಲ್ಲಿ ಮಾತಿನ ಚಕಮಕಿ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿತ್ತು.

ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳ ಸಮ್ಮುಖದಲ್ಲೇ ಬಿಜೆಪಿ ಕಾರ್ಯಕರ್ತ ಧೀರೇಂದ್ರ ಸಿಂಗ್ ಎಂಬಾತ 46 ವರ್ಷದ ಜೈಪ್ರಕಾಶ್ ಎಂಬ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆಗೈದಿದ್ದ.  ಈತ ಶಾಸಕ ಸುರೇಂದ್ರ ಸಿಂಗ್ ನಿಕಟವರ್ತಿ ಎಂದು ವರದಿ ನಂತರ ತಿಳಿದುಬಂದಿತ್ತು. ಘಟನೆ ನಡೆದ ಕೂಡಲೇ ಧೀರೇಂದ್ರ ಸಿಂಗ್ ತಲೆಮರೆಸಿಕೊಂಡಿದ್ದ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಯನ್ನು ಅಮಾನತುಗೊಳಿಸಿ ಮುಖ್ಯಮಂತ್ರಿ ಆದಿತ್ಯನಾಥ್ ಆದೇಶ ಹೊರಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next