Advertisement

ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತರಾಗಿ

02:31 PM Jun 29, 2019 | Team Udayavani |

ಕೊಪ್ಪಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧ ದಿನಾಚರಣೆ ಅಂಗವಾಗಿ ನಗರದ ಹಳೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ಎಸ್‌.ಕೆ. ದೇಸಾಯಿ ಚಾಲನೆ ನೀಡಿದರು.

Advertisement

ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಜಂಬಯ್ಯ, ತಾಲೂಕು ಆರೋಗ್ಯ ಅಧಿಕಾರಿ ಡಾ| ರಾಮಾಂಜನೇಯ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ| ಸುಹಾಸ್‌ ಕೆ.ಎಲ್. ಹಾಗೂ ನಗರ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಕಿರಿಯ ಆರೋಗ್ಯ ಸಹಾಯಕಿ ತರಬೇತಿ ಕೇಂದ್ರ ವಿದ್ಯಾರ್ಥಿನಿಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಜಾಥಾ ಹಳೇ ಜಿಲ್ಲಾ ಆಸ್ಪತ್ರೆ ಆವರಣದಿಂದ ಕೇಂದ್ರ ಬಸ್‌ ನಿಲ್ದಾಣ, ಡಾ| ಸಿಂಪಿ ಲಿಂಗಣ್ಣ ರಸ್ತೆ ಮಾರ್ಗವಾಗಿ ಪುನಃ ಹಳೇ ಜಿಲ್ಲಾ ಆಸ್ಪತ್ರೆ ಆವರಣದವರೆಗೂ ಸಾಗಿತು.

Advertisement

Udayavani is now on Telegram. Click here to join our channel and stay updated with the latest news.

Next