Advertisement

ರಾಷ್ಟ್ರಪತಿ ಭವನದಲ್ಲಿ ಸಾವು

06:00 AM Jun 09, 2018 | |

ಹೊಸದಿಲ್ಲಿ: ರಾಷ್ಟ್ರಪತಿ ಭವನದ ಸಿಬ್ಬಂದಿ ವಸತಿಗೃಹದಲ್ಲಿ ಗುರುವಾರ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಅದು ರಾಷ್ಟ್ರಪತಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿ 5 ದಿನಗಳ ಹಿಂದೆಯೇ ತಮ್ಮ ಕೊಠಡಿಯಲ್ಲೇ ಮೃತಪಟ್ಟಿದ್ದಾರೆ. ಆದರೆ, ಈ ವಿಷಯ ಯಾರಿಗೂ ಗೊತ್ತಾಗಿರಲಿಲ್ಲ. ಗುರುವಾರ ಕೆಟ್ಟ ವಾಸನೆ ಬರುತ್ತಿದೆ ಎಂದು ನಿವಾಸಿಗಳು ದೂರಿದ್ದು, ಪರಿಶೀಲಿಸಿದಾಗ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಠಡಿಗೆ ಒಳಗಿನಿಂದಲೇ ಚಿಲಕ ಹಾಕಲಾಗಿತ್ತು. ವ್ಯಕ್ತಿಯು ಹೃದಯಾಘಾತದಿಂದ ನಿಧನರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next