Advertisement

ಕೃಷಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಕ್ರಮ: ಜಿಟಿಡಿ

06:20 AM Jul 05, 2018 | Team Udayavani |

ವಿಧಾನಪರಿಷತ್ತು: ಬೆಂಗಳೂರು, ಧಾರವಾಡ, ರಾಯಚೂರು ಸೇರಿದಂತೆ ರಾಜ್ಯದ ಕೃಷಿ ವಿವಿಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

Advertisement

ಬಿಜೆಪಿಯ ಎನ್‌. ರವಿಕುಮಾರ್‌ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಕೃಷಿ ವಿವಿ ವಿದ್ಯಾರ್ಥಿಗಳು ಸದ್ಯ ಎದುರಿಸುತ್ತಿರುವ ಸಮಸ್ಯೆಗಳು ಉನ್ನತ ಶಿಕ್ಷಣ ಇಲಾಖೆ ಮತ್ತು ಕೃಷಿ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಆದ್ದರಿಂದ ಎರಡೂ ಇಲಾಖೆಗಳು ಪರಸ್ಪರ ಚರ್ಚಿಸಿ ಪರಿಹಾರ ಸೂತ್ರ ಕಂಡು ಹಿಡಿಯಬೇಕಾಗಿದೆ. ಅಗತ್ಯ ಬಿದ್ದಲ್ಲಿ ಕಾನೂನು ತಿದ್ದುಪಡಿ ತರುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದರು.

ಇದಕ್ಕೆ ಧ್ವನಿಗೂಡಿಸಿದ ಕಾನೂನು ಸಚಿವ ಕೃಷ್ಣಭೈರೇಗೌಡ, ಕೃಷಿ ವಿವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಎರಡು ಇಲಾಖೆಗೆ ಸಂಬಂಧಪಟ್ಟಿವೆ. 2012ರಲ್ಲಿ ಉನ್ನತ
ಶಿಕ್ಷಣ ಇಲಾಖೆ ಕಾಯ್ದೆ ತಂದಿತ್ತು. ಈಗ ಕಾನೂನು ಇತಿಮಿತಿಯೊಳಗೆ ಕ್ರಮ ಕೈಗೊಳ್ಳಬೇಕಾಗಿದೆ. ಒಂದೆರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಕೃಷಿ ವಿವಿ ವಿದ್ಯಾರ್ಥಿಗಳ ಹಿತ ಕಾಪಾಡಲು ಸರ್ಕಾರ ಬದಟಛಿವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next