Advertisement

ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಸಾಧ್ಯತೆ

05:38 PM Apr 22, 2022 | Team Udayavani |

ಬೆಂಗಳೂರು: ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಶನಿವಾರದಿಂದ 4 ದಿನ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Advertisement

ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈಸುಳಿಗಾಳಿಯಿಂದ ರಾಜ್ಯದ ಹಲವೆಡೆ ಈಗಾಗಲೇ ಮಳೆ ಸುರಿಯುತ್ತಿದೆ. ಇದು ಏ.26ರ ವರೆಗೂ ಮುಂದುವರಿಯಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹವಾಮಾನ ತಜ್ಞ ಪ್ರಸಾದ್‌ ತಿಳಿಸಿದ್ದಾರೆ.

ಗುರುವಾರ ಸಂಜೆ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಉಡುಪಿ ಜಿಲ್ಲೆಯ ಕುಂದಾಪುರ, ಧಾರವಾಡ ಜಿಲ್ಲೆಯ ಅಣ್ಣಿಗೆರೆ ಸೇರಿದಂತೆ ಹಲವೆಡೆ 6 ಸೆಂ.ಮೀ. ಮಳೆಯಾಗಿದೆ.

ಶಿವಮೊಗ್ಗದ ಮಂಡಗದ್ದೆ, ದಾವಣೆಗೆರೆ, ಚಿತ್ರದುರ್ಗ, ಶಿರಸಿಸ ಕಲಬುರಗಿ, ಯಾದಗಿರಿ ಸೇರಿದಂತೆ ಹಲವು ಪ್ರದೇಶಗಳಲ್ಲಿಸಾಧಾರಣ ಮಳೆ ಸುರಿದಿದೆ. ಇದು ಇನ್ನೂ 4 ದಿನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು; ಆದರೆ ತೆರಿಗೆ…: ಉಪ್ಪಿ ಟ್ವೀಟ್ !

Advertisement

ಕರಾವಳಿ, ದಕ್ಷಿಣ ಒಳನಾಡು ಪ್ರದೇಶಗಳು, ಮಲೆನಾಡಿನ ಪಶ್ಚಿಮ ಘಟ್ಟ ಪ್ರದೇಶಗಳು ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಶನಿವಾರ ಒಂದೆರಡು ಕಡೆ ಮಳೆಯಾಗಲಿದೆ.

ಏ.24 ಮತ್ತು 25ರಂದು ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next