Advertisement

Parkala ಪರವಾನಿಗೆ ಇಲ್ಲದೆ ದಾಸ್ತಾನು: 1.20 ಲ.ರೂ.ಮೌಲ್ಯದ ಪಟಾಕಿ ವಶಕ್ಕೆ

07:57 PM Oct 11, 2023 | Team Udayavani |

ಉಡುಪಿ: ಬೆಂಗಳೂರಿನ ಅತ್ತಿಬೆಲೆಯಲ್ಲಿ ನಡೆದ ದುರಂತದ ಬಳಿಕ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಬುಧವಾರ ಪರ್ಕಳದಲ್ಲಿ ಪರವಾನಿಗೆ ಇಲ್ಲದೆ ಪಟಾಕಿ ದಾಸ್ತಾನು ಇರಿಸಿದ್ದ ಅಂಗಡಿಯ ಮೇಲೆ ದಾಳಿ ನಡೆಸಲಾಗಿದೆ.

Advertisement

ಪರ್ಕಳದ ಮುಖ್ಯರಸ್ತೆಯಲ್ಲಿರುವ ಪ್ರಾವಿಜನ್‌ ಸ್ಟೋರ್‌ಗೆ ಮಣಿಪಾಲ ಠಾಣೆಯ ಇನ್‌ಸ್ಪೆಕ್ಟರ್‌, ತಹಶೀಲ್ದಾರ್‌ ಹಾಗೂ ಅಗ್ನಿಶಾಮಕ ದಳ ಜಂಟಿಯಾಗಿ ದಾಳಿ ನಡೆಸಿದೆ. ಈ ವೇಳೆ 766 ಕೆಜಿಯ ಸುಮಾರು 1.20 ಲ.ರೂ.ಮೌಲ್ಯದ ಅಕ್ರಮ ಪಟಾಕಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಪ್ರಾವಿಜನ್‌ ಸ್ಟೋರ್‌ ಹಾಗೂ ರಸಗೊಬ್ಬರ ಮಾರಾಟ ಅಂಗಡಿಯ ಹಿಂಬದಿಯ ಗೋಡೌನ್‌ನಲ್ಲಿ ಇಪ್ಪತ್ತಕ್ಕೂ ಅಧಿಕ ಪಟಾಕಿ ಬಾಕ್ಸ್‌ಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಳ್ಳಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next