Advertisement

ಸಿಎಂಗೆ ಹೊಟ್ಟೆನೋವು: ವಿಶ್ರಾಂತಿಗೆ ಮೊರೆ

06:25 AM Oct 25, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಬುಧವಾರದ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಯಿತು.

Advertisement

ವಾಲ್ಮೀಕಿ ಜಯಂತಿ ಪ್ರಯುಕ್ತ ಶಾಸಕರ ಭವನ ಆವರಣದಲ್ಲಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ವಿಧಾನಸೌಧ ಬಾಂಕ್ವೆಟ್‌ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದಾದ ನಂತರ ಧರ್ಮಸ್ಥಳಕ್ಕೆ ಭೇಟಿ ನೀಡುವ ಕಾರ್ಯಕ್ರಮವೂ ಇತ್ತು. ಆದರೆ, ಬೆಳಗ್ಗೆ ದಿಢೀರ್‌ ಹೊಟ್ಟೆನೋವು ಕಾಣಿಸಿಕೊಂಡ ನಂತರ ಎಲ್ಲ ಕಾರ್ಯಕ್ರಮ ರದ್ದುಗೊಳಿಸಲಾಯಿತು.

ದಿಢೀರ್‌ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿ ಅವರಿಗೆ ಜಯದೇವ ಹೃದ್ರೋಗ ಆಸ್ಪತ್ರೆಗೆಯಲ್ಲಿ  ಇಸಿಜಿ ಹಾಗೂ ಎಂಆರ್‌ಐ ಸ್ಕ್ಯಾನ್‌ ನಂತರ 45 ನಿಮಿಷ ಆರೋಗ್ಯ ತಪಾಸಣೆ ನಡೆಸಲಾಯಿತು. ಒಂದು ದಿನದ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದರು. ಕುಮಾರಸ್ವಾಮಿಯವರಿಗೆ ಇಸಿಜಿ, ಎಂಆರ್‌ಐ ಮಾಡಲಾಯಿತು. ಎಲ್ಲವೂ ನಾರ್ಮಲ್‌ ಆಗಿದೆ. ಒಂದು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next