Advertisement

ಪರಮೇಶ್ವರ್ ತಲೆಗೆ ಕಲ್ಲು :ಕೊರಟಗೆರೆ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

08:03 PM Apr 29, 2023 | Team Udayavani |

ಕೊರಟಗೆರೆ: ಕಾಂಗ್ರೆಸ್ ಪ್ರಚಾರದ ವೇಳೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತಲೆಗೆ ಕಲ್ಲೆಸೆದ ಕಿಡಿಗೇಡಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಶನಿವಾರ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಕೊರಟಗೆರೆ ಪಟ್ಟಣದ ಪೊಲೀಸ್ ಠಾಣೆಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದ್ದಾರೆ.

Advertisement

ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂ ವ್ಯಾಪ್ತಿಯ ಬೈರೇನಹಳ್ಳಿ ಸರ್ಕಲ್‌ನಲ್ಲಿ ಶುಕ್ರವಾರ ಸಂಜೆ ಕಾಂಗ್ರೆಸ್ ಪಕ್ಷದಿಂದ ಮೆರವಣಿಗೆ ನಡೆಸುವಾಗ ಶಾಸಕ ಡಾ.ಜಿ.ಪರಮೇಶ್ವರ ತಲೆಗೆ ಕಲ್ಲೆಸೆದ ಕಿಡಿಗೇಡಿಯನ್ನು ಬಂಧಿಸುವಂತೆ ಒತ್ತಾಯಿಸಿ ಸರಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ರಾಯಸಂದ್ರ ರವಿಕುಮಾರ್ ಮಾತನಾಡಿ, ರಾಜ್ಯ ಸರಕಾರ ತತ್ ಕ್ಷಣ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕಿದೆ. ಪರಮೇಶ್ವರ್ ತಲೆಗೆ ಕಲ್ಲೇಟು ಹಾಕಿದ ಕಿಡಿಗೇಡಿಯನ್ನು ತಕ್ಷಣ ಬಂಧಿಸಬೇಕಿದೆ.ಪೊಲೀಸ್ ಇಲಾಖೆ ನಮ್ಮ ಕಾರ್ಯಕರ್ತರ ತಾಳ್ಮೆಯನ್ನು ಪರೀಕ್ಷೆ ಮಾಡಬೇಡಿ. ಮತ್ತೆ ಪರಮೇಶ್ವರ್ ಅವರಿಗೆ ಏನಾದರು ಆದರೇ ಅದಕ್ಕೆ ಜಿಲ್ಲಾಡಳಿತ ಹೊಣೆ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತುಮಕೂರು ನಗರಸಭಾ ಮಾಜಿ ಅಧ್ಯಕ್ಷ ವಾಲೇಚಂದ್ರಯ್ಯ ಮಾತನಾಡಿ, ಕರ್ನಾಟಕ ಮತ್ತು ಕೊರಟಗೆರೆ ಜನತೆ ಪರಮೇಶ್ವರ ಜೊತೆಯಲ್ಲಿ ಇದ್ದಾರೆ. ಕೊರಟಗೆರೆ ಕ್ಷೇತ್ರದಿಂದ ೨೦೨೩ಕ್ಕೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೇ ನಿಮ್ಮನ್ನು ಗೆಲ್ಲಿಸಿ ಕಳಿಸುತ್ತೇವೆ. ದಲಿತ ಮುಖಂಡನಿಗೆ ಹೀಗಾದರೇ ಇನ್ನೂ ಸಾಮಾನ್ಯ ಜನರ ಪಾಡೇನು. ತಕ್ಷಣ ಪೊಲೀಸ್ ಇಲಾಖೆ ಕಿಡಿಗೇಡಿ ಆರೋಪಿಯನ್ನು ಬಂಧಿಸಬೇಕಿದೆ ಎಂದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ್, ಯುವಾಧ್ಯಕ್ಷ ಬೈರೇಶ್,ಮುಖಂಡರಾದ ಬಲರಾಮಯ್ಯ, ನಂದೀಶ್, ಮಕ್ತಿಯಾರ್, ಕೆ.ಎಲ್.ಆನಂದ್, ಜೆಟ್ಟಿಅಗ್ರಹಾರ ನಾಗರಾಜು, ನರಸಿಂಹಮೂರ್ತಿ, ರಾಘವೇಂದ್ರ ಸೇರಿದಂತೆ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next