ಇಸ್ಲಾಮಾಬಾದ್: ಇಸ್ಲಾಮಾಬಾದ್ ನ ಶ್ರೀನಗರ ಹೆದ್ದಾರಿಯಲ್ಲಿ ಶುಕ್ರವಾರ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ ಗೆ ಕರೆದೊಯ್ಯುವಾಗ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ.
ಇಸ್ಲಾಮಾಬಾದ್ ನ ಶ್ರೀನಗರ ಹೈವೇ ಜಿ-13 ಇಸ್ಲಾಮಾಬಾದ್ ನಲ್ಲಿ ಇಂದು ಸಾವಿರಾರು ಪಾಕಿಸ್ತಾನಿಗಳು ಜಮಾಯಿಸಿ ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಶ್ರೀನಗರ ಹೆದ್ದಾರಿಯಲ್ಲಿ ಪಿಟಿಐ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದ ನಂತರ ಭದ್ರತಾ ಪಡೆಗಳು 30 ಜನರನ್ನು ಬಂಧಿಸಿವೆ. ಅವರನ್ನು ಹೈಕೋರ್ಟ್ಗೆ ಕರೆದೊಯ್ಯುವ ವೇಳೆ ಹೆದ್ದಾರಿಯಲ್ಲಿ ಕಲ್ಲು ತೂರಾಟ ಮತ್ತು ಭಾರೀ ಶೆಲ್ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿಯ ಮನ್ ಕಿ ಬಾತ್ ಕಾರ್ಯಕ್ರಮ ಕೇಳದ 36 ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷೆ!
ಭಾರೀ ಶೆಲ್ ದಾಳಿ ಮತ್ತು ಕಲ್ಲು ತೂರಾಟದ ನಂತರ, ಶ್ರೀನಗರ ಹೆದ್ದಾರಿಯನ್ನು ಸಂಚಾರಕ್ಕೆ ಮುಚ್ಚಲಾಗಿದೆ ಎಂದು ಇಸ್ಲಾಮಾಬಾದ್ ಪೊಲೀಸರು ತಿಳಿಸಿದ್ದಾರೆ.
“ಶ್ರೀನಗರ ಹೆದ್ದಾರಿಯನ್ನು ಸಂಚಾರಕ್ಕೆ ಮುಚ್ಚಲಾಗಿದೆ. ನಾಗರಿಕರು ಪರ್ಯಾಯ ಮಾರ್ಗಗಳನ್ನು ತೆಗೆದುಕೊಳ್ಳುವಂತೆ ವಿನಂತಿಸಲಾಗಿದೆ” ಎಂದು ಇಸ್ಲಾಮಾಬಾದ್ ಪೊಲೀಸರು ಟ್ವೀಟ್ ಮಾಡಿದ್ದಾರೆ. ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿ ಪಾಕಿಸ್ತಾನದಲ್ಲಿ ಪೊಲೀಸರು ತುರ್ತು ಆದೇಶವನ್ನು ವಿಧಿಸಿದ್ದಾರೆ.