Advertisement

Sankeshwar: ಸಾರಿಗೆ ಸಂಸ್ಥೆಯ ಬಸ್ಸಿನ ಮೇಲೆ ಕಲ್ಲು ಎಸೆದ ಪ್ರಕರಣ: ಇಬ್ಬರ ಬಂಧನ

11:39 AM Dec 22, 2023 | Team Udayavani |

ಸಂಕೇಶ್ವರ: ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಬಳಿ ಡಿ.21ರ ಗುರುವಾರ ರಾತ್ರಿ ನಡೆದ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ.

Advertisement

ಪರಶುರಾಮ ನಾಯಿಕ ಮತ್ತು ಬಸವರಾಜ ಶಿಂಧೆ ಬಂಧಿತರು. ಇವರು ಗೋವಾ ರಾಜ್ಯದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಗುರುವಾರ ರಾತ್ರಿ ಹುಕ್ಕೇರಿಯಿಂದ ಬೆಳಗಾವಿಗೆ ಹೊರಟ್ಟಿದ್ದ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಲ್ಲು ಎಸೆಯಲಾಗಿತ್ತು. ಈ ಘಟನೆಯಲ್ಲಿ ಓರ್ವ ಪ್ರಯಾಣಿಕನಿಗೆ ಗಾಯವಾಗಿತ್ತು.

ಪ್ರಕರಣದ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಈ ಇಬ್ಬರನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next