Advertisement

42ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ,ಸಂಚಾರ ಸ್ಥಗಿತ 

04:00 AM Jan 09, 2019 | |

ಬೆಂಗಳೂರು: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ ನೀತಿ ಖಂಡಿಸಿ  ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್‌ನ 2 ನೇ ದಿನವಾದ ಬುಧವಾರ ಹಲವೆಡೆ ದುಷ್ಕರ್ಮಿಗಳು ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿ ದುಷ್ಕೃತ್ಯ ಮೆರೆದಿದ್ದಾರೆ. 

Advertisement

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 12 ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬುಧವಾರ ಬೆಳಗ್ಗೆ 30 ಬಸ್‌ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. 

ಕಲ್ಲು ತೂರಾಟ ಹಿನ್ನಲೆಯಲ್ಲಿ ಬಸ್‌ ಸಂಚಾರವನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಸಾವಿರಾರು ಮಂದಿ ಸಂಚಾರ ಸಾಧ್ಯವಾಗದೆ ಪರದಾಡುತ್ತಿದ್ದಾರೆ. 

ಮಂಗಳವಾರದ ಬಂದ್‌ಗೆ  ಬೆಂಗಳೂರು ಸಹಿತ ಹಲವೆಡೆ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ.  ಅಲ್ಲಲ್ಲಿ ಒತ್ತಾಯ ಪೂರ್ವಕವಾಗಿ ಅಂಗಡಿ-ಮುಂಗಟ್ಟುಗಳಿಗೆ ಬೀಗ ಮತ್ತಿತರ ಅಹಿತಕರ ಘಟನೆ ಗಳ ನಡುವೆ ಸಾರ್ವತ್ರಿಕ ಮುಷ್ಕರಕ್ಕೆ ನಿರೀಕ್ಷಿತ ಬೆಂಬಲ ವ್ಯಕ್ತವಾಗಿರಲಿಲ್ಲ. 

Advertisement

Udayavani is now on Telegram. Click here to join our channel and stay updated with the latest news.

Next