Advertisement

Stones pelted: ರಾಜಸ್ಥಾನದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ

09:44 AM Oct 13, 2023 | Team Udayavani |

ರಾಜಸ್ಥಾನ: ಉದಯಪುರ ಸಿಟಿ-ಜೈಪುರ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಕಲ್ಲು ತೂರಾಟದಿಂದ ರೈಲಿನ ಕಿಟಕಿಯ ಗಾಜು ಪುಡಿಯಾಗಿದ್ದು ಯಾವುದೇ ಪ್ರಯಾಣಿಕರು ಅಥವಾ ರೈಲು ಸಿಬ್ಬಂದಿ ಗಾಯಗೊಂಡಿಲ್ಲ ಎಂದು ಹೇಳಲಾಗಿದೆ.

ರಾಯಲ ನಿಲ್ದಾಣದ ಮೂಲಕ ರೈಲು ಹಾದು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ರೈಲು ಮೇಲೆ ಕಲ್ಲು ಎಸೆದಿದ್ದು, ಕೊನೆಯ (ಸಿ7) ಕೋಚ್‌ನ ಕಿಟಕಿಗೆ ಹಾನಿಯಾಗಿದೆ ಎಂದು ಚಿತ್ತೋರ್‌ಗಢ ಜಿಆರ್‌ಪಿ ನಿಲ್ದಾಣದ ಛೋಟುಲಾಲ್ ಹೇಳಿದ್ದಾರೆ.

ರಾಯಲ ಠಾಣಾಧಿಕಾರಿಗಳ ವರದಿ ಆಧರಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘Operation Ajay’: ಇಸ್ರೇಲ್​ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಬಂದಿಳಿದ 212 ಭಾರತೀಯರು

Advertisement

 

Advertisement

Udayavani is now on Telegram. Click here to join our channel and stay updated with the latest news.

Next