Advertisement

ಗಣಿಗಾರಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಕಲ್ಲು ತೂರಾಟ

07:55 AM May 14, 2018 | |

ಚಿತ್ರದುರ್ಗ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ದೊಡ್ಡಾಪುರ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ ಘಟನೆ ತಾಲೂಕಿನ ಕಕ್ಕೇರು ಅರಣ್ಯ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

Advertisement

ಕಲ್ಲು ತೂರಾಟದಿಂದ ಅರಣ್ಯ ಇಲಾಖೆ ಎಂಟು ಸಿಬ್ಬಂದಿ ಗಾಯಗೊಂಡಿದ್ದಾರೆ. ಉಪ ವಲಯ ಅರಣ್ಯಾಧಿಕಾರಿ ಹರಿದಾಸ್‌ ನಾಯ್ಕ, ಅರಣ್ಯ ರಕ್ಷಕ ಗುರುಮೂರ್ತಿ, ರಾಮಣ್ಣ, ಅನೀಶ, ಪುನೀತ್‌, ವೆಂಕಟೇಶ್‌, ಕಿರಣ್‌, ತಿಪ್ಪೇಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಾÂಕ್ಟರ್‌ ಅನ್ನು ಅರಣ್ಯಾ ಧಿಕಾರಿಗಳು ತಡೆಗಟ್ಟಿದರು. ಇದರಿಂದ ರೊಚ್ಚಿಗೆದ್ದು ಯುವಕರ ಗುಂಪು ಕಲ್ಲು ತೂರಾಟ ನಡೆಸಿದೆ. ಅರಣ್ಯಾಧಿ ಕಾರಿಗಳು ಮತ್ತು
ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿತ್ತು. ಕಲ್ಲು ಗಣಿಗಾರಿಕೆ ನಡೆಸಲು ಅರಣ್ಯಾಧಿಕಾರಿಗಳು ಅನುಮತಿ ನೀಡದಿರುವುದು ಕಲ್ಲು ತೂರಾಟಕ್ಕೆ ಕಾರಣ ಎನ್ನಲಾಗುತ್ತಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next