Advertisement

ಕೋವಿಡ್ ತಡೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಲ್ಲಿಸಿ: ಸಿದ್ದರಾಮಯ್ಯ ಸಲಹೆ

01:49 PM Dec 03, 2021 | Team Udayavani |

ಚಿಕ್ಕಮಗಳೂರು: ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರ ಸರಿಯಾದ ಸಿದ್ಧತೆಯನ್ನು ಮಾಡಿಕೊಂಡಿರಲಿಲ್ಲ. ಹೀಗಾಗಿ ತುಂಬಾ ಜನ ಸಾವನ್ನಪ್ಪಿದ್ದರು, ಈ ಬಾರಿ ಹಾಗಾಗದಂತೆ ನೋಡಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟೊತ್ತಿಗಾಗಲೇ ಸರ್ಕಾರ ಎರಡು ಡೋಸ್ ಮುಗಿಸಬೇಕಿತ್ತು. ಬೂಸ್ಟರ್ ವ್ಯಾಕ್ಸಿನೇಷನ್ ಮಾಡಿಸಲು ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದರು.

ಇಬ್ಬರಿಗೆ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಹರಡದಂತೆ ಕ್ರಮ ಕೈಗೊಳ್ಳಬೇಕು. ಅಂತಾರಾಷ್ಟ್ರೀಯ ವಿಮಾನಗಳನ್ನು ನಿಲ್ಲಿಸಬೇಕು. ವಿಮಾನ ನಿಲ್ದಾಣದಲ್ಲಿ ಸರಿಯಾದ ತಪಾಸಣೆಯಾಗಬೇಕು ಎಂದು ಅವರು ಒತ್ತಾಯಿಸಿದರು.

ಗೂಂಡಾಗಳನ್ನು ಕರೆಯಿಸಿ ಕಾಂಗ್ರೆಸ್ ನಿಂದ ಪ್ರಚಾರ ನಡೆಸಲಾಗುತ್ತಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಟಾಂಗ್ ನೀಡಿದ ಸಿದ್ದರಾಮಯ್ಯ, ಜಾರಕಿಹೊಳಿ ಅವರ ಪಕ್ಷದ ವಿರುದ್ಧವಾಗಿಯೇ ಅಭ್ಯರ್ಥಿ ನಿಲ್ಲಿಸಿಕೊಂಡಿದ್ದಾರೆ. ಈ ರೀತಿ ಹೇಳಿಕೆ ನೀಡಲು ಅವರಿಗೆ ಯಾವ ನೈತಿಕತೆ ಇದೆ? ಲಖನ್ ಜಾರಕಿಹೊಳಿಯನ್ನು ಚುನಾವಣೆಗೆ ನಿಲ್ಲಿಸಿರುವುದು ಯಾರು? ಬಿಜೆಪಿ ಅಧಿಕೃತ ಅಭ್ಯರ್ಥಿ ಇದ್ದರೂ ಅವರ ತಮ್ಮನನ್ನ ನಿಲ್ಲಿಸಿದ್ದಾರೆ ಎಂದು ತಿರುಗೇಟು ನೀಡಿದರು.

ಸಿಎಂ ಬದಲಾವಣೆ ಕುರಿತು ಈಶ್ವರಪ್ಪ ಬಾಯಿತಪ್ಪಿ ಸತ್ಯ ಹೇಳಿದ್ದಾರೆ. ಆಮೇಲೆ ಸರಿಪಡಿಸಿಕೊಳ್ಳಲು ಹೋಗುತ್ತಿದ್ದಾರೆ, ಆದರೆ ಜನರಿಗೆ ಗೊತ್ತಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next