Advertisement

ಕೊರಟಗೆರೆಯಾದ್ಯಂತ ಬೀದಿ ನಾಯಿಗಳ ಹಾವಳಿ; ಸಾರ್ವಜನಿಕರಲ್ಲಿ ಆತಂಕ

10:24 PM Oct 11, 2022 | Team Udayavani |

ಕೊರಟಗೆರೆ :ತಾಲೂಕಿನಾದ್ಯಂತ  ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.

Advertisement

ಬೀದಿ ನಾಯಿಗಳ ಕಾಟದಿಂದ ಮಕ್ಕಳನ್ನು ಹೊರಗೆ ಬೀಡುವುದು ಕಷ್ಟವಾಗಿದೆ ಎಂದು ಪಾಲಕರು ತಮ್ಮ ಅಳಲನ್ನು ಹಂಚಿಕೊಂಡಿದ್ದಾರೆ. ಪಕ್ಕದ ರಾಜ್ಯ ಕೇರಳದಲ್ಲಿ ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ಎರಗಿ ದೇಹ ಪೂರ್ತಿಯಾಗಿ ತಿಂದಿರುವುದು ಹಲವು ಮಾಧ್ಯಮಗಳಲ್ಲಿ ಪ್ರಕಟಣ ವಾಗಿರುವುದು ನಾವು ಕೇಳಿದ್ದೇವೆ. ನಮ್ಮ ತಾಲೂಕಿನ   ಅಧಿಕಾರಿಗಳು ಬೀದಿ ನಾಯಿಗಳ ಉಪಟಳವನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.

ಹಿಡಿಶಾಪ
ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪಟ್ಟಣ ಪಂಚಾಯಿತಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನಿಕರು ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ. ತಾಲೂಕಿನ ಚನ್ನರಾಯನ ದುರ್ಗ ಕೊಳಾಲ ಕಸಬಾ . ಹೊಳವನಹಳ್ಳಿ ಹೋಬಳಿಯ. ಬಸ್ ನಿಲ್ದಾಣಗಳ  ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ತಾಲೂಕಿನಾದ್ಯಂತ ಗ್ರಾಮ ಮತ್ತು ಪಟ್ಟಣ ಹೋಬಳಿಯದ್ಯಾಂತ ಮಾಂಸದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ. ನಾನಾ ತಾಲೂಕುಗಳಲ್ಲಿ   ನಾಯಿಗಳ ಹಾವಳಿ ತಡೆಯಲು ಕೆಲ ವರ್ಷಗಳ ಹಿಂದೆ  ವಿಷ ಹಾಕಿ ನಾಯಿಗಳನ್ನು ಕೊಂದಿತ್ತು. ಇದರಿಂದ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಆದ್ದರಿಂದ ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ   ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಹೋಗುವುದನ್ನು ಬಿಟ್ಟಿತ್ತು. ಅಲ್ಲಿಂದ ಇಲ್ಲಿಯವರೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

Advertisement

ಸಂತಾನ ತಡೆ ಚಿಕಿತ್ಸೆ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬಹುದು. ಆದರೆ, ಈ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ  ಮುಂದಾಗುತ್ತಿಲ್ಲ. ಆದ್ದರಿಂದ ಪಟ್ಟಣ ಮತ್ತು ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಬೀದಿ ನಾಯಿಗಳ ಕಾಟದಿಂದ ಮಕ್ಕಳನ್ನು ಹೊರಗೆ ಬೀಡುವುದು ಕಷ್ಟವಾಗಿದೆ. ಶಾಲೆಗೆ ಹೋಗುವಾಗಲೂ ಮಕ್ಕಳು ಭಯದ ವಾತಾವರಣದಲ್ಲಿ ಹೋಗುತ್ತಾರೆ ಎಲ್ಲಿ ನಾಯಿಗಳು ನಮ್ಮ ಮೇಲೆ ಎರಗುತ್ತವೆಯೋ ಎಂಬ ಭಯ ಹುಟ್ಟುತ್ತದೆ.

ಬೀದಿ ನಾಯಿಗಳ ಉಪಟಳಕ್ಕೆ ಜನ ಕಂಗಾಲಾಗಿದ್ದಾರೆ. ಗ್ರಾಮ ಪಂಚಾಯಿತಿ ಮತ್ತು ಪಟ್ಟಣ   ಪಂಚಾಯತಿ  ಇವುಗಳ ನಿಯಂತ್ರಣ ಮಾಡುವುದಕ್ಕೆ ನಿರ್ಲಕ್ಷ್ಯವಹಿಸಿದ್ದಾರೆ.

ಶ್ರೀನಿವಾಸ್.ಎಚ್.ಎನ್. ಚಿಗುರು ಜನಸೇವಾಟ್ರಸ್ಟ್ ಅಧ್ಯಕ್ಷ ಹೊಳವನಹಳ

ಬೀದಿ ನಾಯಿಗಳ ಬಗ್ಗೆ ಸಾಕಷ್ಟು ಕೇಳಿದ್ದೇನೆ ವಾಹನಗಳ ಹಿಂದೆ ಕೊಡುವುದು ಶಾಲೆಗಳಿಗೆ ಹೋಗುವ ಚಿಕ್ಕ ಚಿಕ್ಕ ಮಕ್ಕಳ ಮೇಲೆ ಎರಗುವುದು ನಾನು ಕೇಳಿದ್ದೇನೆ. ಪಕ್ಕದ ರಾಜ್ಯ ಕೇರಳದಲ್ಲಿ ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳ ಮಕ್ಕಳ ಮೇಲೆ ಎರಗಿ ದೇಹ ಪೂರ್ತಿಯಾಗಿ ತಿಂದಿರುವುದು ಹಲವು ಮಾಧ್ಯಮಗಳಲ್ಲಿ ಪ್ರಕಟಣ ವಾಗಿರುವುದು ನಾವು ಕೇಳಿದ್ದೇವೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಮಾಹಿತಿ ರವಾನಿಸುತ್ತೇನೆ.

 ರಾಮಕೃಷ್ಣಯ್ಯ ಎಸ್ ಕೆ- ಅರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು.

ಸಿದ್ದರಾಜು. ಕೆ.ಕೊರಟಗೆರೆ

Advertisement

Udayavani is now on Telegram. Click here to join our channel and stay updated with the latest news.

Next