Advertisement

ಕೇರಳದಲ್ಲಿ ಮುಂದುವರೆದ ಬೀದಿ ನಾಯಿಗಳ ಹಾವಳಿ: ಬಾಲಕಿ ಸೇರಿ 7 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

04:21 PM Jan 02, 2023 | Team Udayavani |

ಕೇರಳ : ಕೇರಳದಲ್ಲಿ ಬೀದಿನಾಯಿಗಳ ಹಾವಳಿ ಮುಂದುವರಿದಿದ್ದು, ಕೊಲ್ಲಂನಲ್ಲಿ 12 ವರ್ಷದ ಬಾಲಕಿ ಸೇರಿದಂತೆ ಏಳು ಜನರ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ ಘಟನೆ ವರದಿಯಾಗಿದೆ.

Advertisement

ಕೊಲ್ಲಂನ ದೇವಸ್ಥಾನದ ಬಳಿ ಹೊರ ರಾಜ್ಯಗಳಿಂದ ಬಂದಿದ್ದ ಅಯ್ಯಪ್ಪ ಭಕ್ತರು ಸೇರಿದಂತೆ 7 ಜನರ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಭಾನುವಾರ ಸಂಜೆ 5.30ರ ಸುಮಾರಿಗೆ ಕೊಲ್ಲಂ ಕುಲತುಪುಳ ಶ್ರೀಧರ್ಮ ಶಾಸ್ತಾವು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.

ನಾಯಿ ದಾಳಿಗೆ ತುತ್ತಾದ ಎಲ್ಲಾ ಏಳು ಮಂದಿಯನ್ನು ಚಿಕಿತ್ಸೆಗಾಗಿ ಕುಲತುಪುಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಇಜಾಕಿ ಮತ್ತು ಮಣಿಕಂದನ್ ಎಂಬ ಇಬ್ಬರನ್ನು ಪುನಲೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಕಳೆದ ಎರಡು ದಿನಗಳಿಂದ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ಈ ವೇಳೆ ಬೀದಿ ನಾಯಿಗಳು ದಾಳಿ ನಡೆಸಿವೆ ಎನ್ನಲಾಗಿದೆ.

ಇದನ್ನೂ ಓದಿ: ನೋಟು ನಿಷೇಧ ಕಾನೂನುಬಾಹಿರ: ಪಂಚಪೀಠದಲ್ಲಿ ಭಿನ್ನ ತೀರ್ಪು ನೀಡಿದ ಜಡ್ಜ್ ಬಿ.ವಿ.ನಾಗರತ್ನ..

Advertisement
Advertisement

Udayavani is now on Telegram. Click here to join our channel and stay updated with the latest news.

Next