Advertisement

ಅಕ್ರಮ ಮರಳುಗಾರಿಕೆ ತಡೆಗೆ ಕ್ರಮ

03:30 PM Sep 09, 2020 | Team Udayavani |

ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಾಣಿಕೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಯುವಲ್ಲಿ ತಾಲೂಕು ಮಟ್ಟದ ಟಾಸ್ಕ್ಫೋರ್ಸ್‌ ಸಮಿತಿ ಕಠಿಣ ಕ್ರಮ ಕೈಗೊಂಡಿದ್ದರೂ ರಾಣೆಬೆನ್ನೂರ, ಬ್ಯಾಡಗಿ, ಹಿರೇಕೆರೂರು, ಹಾವೇರಿ ನದಿ ಪಾತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಅಕ್ರಮಗಳಿಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವ ನಿಟ್ಟಿನಲ್ಲಿ ದಿನದ 24 ಗಂಟೆಮರಳುಗಾರಿಕೆ ಮೇಲೆ ಕಣ್ಗಾವಲು ಇರಿಸಲು ಜಿಲ್ಲಾಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗೆ ಪಾಳೆಯದ ಪ್ರಕಾರ ನಿಯೋಜಿಸಲಾಗಿದೆ.

ನಿಯೋಜಿತ ಅಧಿಕಾರಿಗಳು ತಾಲೂಕು ಟಾಸ್ಕ್ ಫೋರ್ಸ್‌ ಸಮಿತಿಯ ಸಮನ್ವಯತೆಯೊಂದಿಗೆ ನದಿ ಪಾತ್ರದ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆಮಾಡಬೇಕು. ಮರಳು ತಪಾಸಣಾ ಕೇಂದ್ರ, ಮರಳು ತನಿಖಾ ಠಾಣೆ, ಮರಳು ಬ್ಲಾಕ್‌ಗಳು, ಮರಳು ಸ್ಟಾಕ್‌ ಯಾರ್ಡ್‌ಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನದಿ ಪಾತ್ರದಲ್ಲಿ ಸಂಶಯಾಸ್ಪದವಾಗಿ ಓಡಾಡುವ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಪ್ರತಿದಿನ ನಿರ್ವಹಿಸಿದ ಕಾರ್ಯಚಟುವಟಿಕೆಗಳ ಕುರಿತಂತೆ ಕಾಲಕಾಲಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು.

ಜಿಲ್ಲಾ ಮಟ್ಟದ ಅಧಿಕಾರಿಗಳ ನಿಯೋಜನೆ: ಸೆ.9 ರಿಂದ ಅಕ್ಟೋಬರ್‌ 22ರ ವರೆಗೆ ಪ್ರತಿ ದಿನ ಓರ್ವರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸೆ. 9 ರಂದು ಅಬಕಾರಿ ಉಪ ಆಯುಕ್ತರು, ಸೆ.10 ರಂದು ಪಂಚಾಯತ್‌ ರಾಜ್‌ ಕಾರ್ಯನಿರ್ವಾಹಕ ಅಭಿಯಂತರರು, ಸೆ.11 ರಂದು ಪಂಚಾಯತ್‌ ರಾಜ್‌ ಯೋಜನಾ ಅನುಷ್ಠಾನದ ಕಾರ್ಯನಿರ್ವಾಹಕ ಇಂಜಿನಿಯರ್‌, ಸೆ. 12 ರಂದು ಪಶುಪಾಲನಾ ಇಲಾಖೆ ಉಪನಿರ್ದೇಶಕರು, ಸೆ.13 ರಂದು ಡಿಡಿಪಿಐ, ಸೆ.14 ರಂದು ಜಂಟಿ ಕೃಷಿ ನಿರ್ದೇಶಕರು, ಸೆ.15 ರಂದು ಕನಾಟಕ ಗ್ರಾಮೀಣಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದಕಾರ್ಯನಿರ್ವಾಹಕ ಇಂಜಿನಿಯರ, ಸೆ.16 ರಂದುತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಸೆ.17 ರಂದು ಜಿಲ್ಲಾ ನೋಂದಣಿ ಅಧಿಕಾರಿ, ಸೆ. 18 ರಂದು ಸಮಾಜ ಕಲ್ಯಾಣ ಇಲಾಖೆಉಪನಿರ್ದೇಶಕರು, ಸೆ. 19 ರಂದು ಹಿಂದುಳಿದವರ್ಗಗಳ ಕಲ್ಯಾಣಾಧಿ ಕಾರಿಗಳು, ಸೆ.20 ರಂದುಅಲ್ಪಸಂಖ್ಯಾತರ ಕಲ್ಯಾಣಾಧಿ ಕಾರಿಗಳು, ಸೆ.21 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಸೆ.22 ರಂದು ಡಾ| ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಸೆ.23 ರಂದು ಕೈಗಾರಿಕೆ ಜಂಟಿ ನಿರ್ದೇಶಕರು, ಸೆ.24 ರಂದುಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ), ಸೆ. 25 ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಸಾಮಾಜಿಕ), ಸೆ.26 ರಂದು ಸಹಕಾರ ಸಂಘಗಳ ಉಪನಿಬಂಧಕರು, ಸೆ.27 ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌, ಸೆ.28 ರಂದು ತುಂಗಾ ಮೇಲ್ದಂಡೆ ಯೋಜನೆ ಕಾರ್ಯನಿರ್ವಾಹಕ ಇಂಜಿನಿಯರ್‌, ಸೆ.29 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಸೆ.30 ರಂದು ಜಿಲ್ಲಾ ವಯಸ್ಕರ ಶಿಕ್ಷಣಾ ಧಿಕಾರಿಗಳನ್ನು ನಿಯೋಜಿಸಲಾಗಿದೆ.

ಅ.1 ರಂದು ರೇಷ್ಮೆ ಇಲಾಖೆ ಉಪನಿರ್ದೇಶಕರು, ಅ.2 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು, ಅ.3 ರಂದು ಗೃಹ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಅ.4 ರಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಅ.5 ರಂದು ಅಲ್ಪಸಂಖ್ಯಾತರ ಅಭಿವೃದ್ಧಿನಿಗಮದ ಜಿಲ್ಲಾ ವ್ಯವಸ್ಥಾಪಕರು, ಸೆ.6 ರಂದು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಅ.7 ರಂದು ಜಿಲ್ಲಾ ಪಂಚಾಯತ್‌ ಡಿಆರ್‌ಡಿಎ ಯೋಜನಾ ನಿರ್ದೇಶಕರು, ಅ.8 ರಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಅ.9 ರಂದು ಹಾವೇರಿ ಉಪ ಕೃಷಿ ನಿರ್ದೇಶಕರು, ಅ.10 ರಂದು ರಾಣೆಬೆನ್ನೂರು ಉಪ ಕೃಷಿ ನಿರ್ದೇಶಕರು, ಅ.11 ರಂದು ಜವಳಿ ಮತ್ತು ಕೈಮಗ್ಗ ಇಲಾಖೆ ಉಪನಿರ್ದೇಶಕರು, ಅ.12 ರಂದು ಲೋಕೋಪಯೋಗಿ ಬಂದರು ಹಾಗೂ ಒಳನಾಡುಜಲ ಸಾರಿಗೆ ವಿಭಾಗದ ಕಾರ್ಯನಿರ್ವಾಹಕಅಭಿಯಂತರರು, ಅ.13 ರಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ ಕಾರಿಗಳು, ಅ.14 ರಂದು ಪರಿಸರ ಅಧಿಕಾರಿಗಳು, ಅ.15 ರಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಅ.16 ರಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಕಾರಿಗಳು, ಅ.17 ರಂದು ಆಹಾರ ಸುರಕ್ಷತೆ ಇಲಾಖೆ ಜಿಲ್ಲಾ ಅಂಕಿತ ಅಧಿಕಾರಿಗಳು, ಅ.18 ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಅ.19 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾ ಧಿಕಾರಿಗಳು, ಅ.20 ರಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಅ.21 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಅ.22 ರಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next