Advertisement

ಸಮನ್ವಯತೆಯಿಂದ ಪಕ್ಷದ ಗೆಲುವಿಗೆ ಶ್ರಮಿಸಿ

06:40 AM Apr 20, 2018 | Team Udayavani |

ಬೆಂಗಳೂರು: ಸಾಮಾಜಿಕ ಜಾಲತಾಣ ಹಾಗೂ ಪ್ರಚಾರ ಮತ್ತು ಮಾಧ್ಯಮ ವಿಭಾಗ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ
ಪಕ್ಷದ ಗೆಲುವಿಗೆ ಶ್ರಮಿಸುವಂತೆ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಕಿವಿಮಾತು ಹೇಳಿದ್ದಾರೆ. 

Advertisement

ಬಿಜೆಪಿ ಕಚೇರಿಯಲ್ಲಿ ಪ್ರಚಾರ, ಮಾಧ್ಯಮ,ಸಾಮಾಜಿಕ ಜಾಲತಾಣ, ಕಾನೂನು ವಿಭಾಗಗಳ ಸಭೆ ನಡೆಸಿದ ಅವರು, ಕರ್ನಾಟಕದ ಚುನಾವಣೆ ಬಿಜೆಪಿ ಪಾಲಿಗೆ ಮಹತ್ವದ್ದಾಗಿದೆ. 

ಬೆಂಗಳೂರು, ಬೆಳಗಾವಿ, ಬಳ್ಳಾರಿ,ಮಂಗಳೂರು, ಮೈಸೂರು, ಕಲಬುರಗಿ, ಶಿವಮೊಗ್ಗ ಮಹಾನಗರಗಳಲ್ಲಿ ನಗರ ಪ್ರದೇಶದ ಜನತೆಗೆ ನಮ್ಮ ಕಾರ್ಯಕ್ರಮಗಳು ಹಾಗೂ ಕೇಂದ್ರದ ಯೋಜನೆಗಳ ಮಾಹಿತಿಯನ್ನು ಮನೆ ಮನೆಗೆ ತಲುಪಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.

ಕಾನೂನು ವಿಭಾಗ ಮತ್ತಷ್ಟು ಸುಧಾರಣೆಯಾಗಬೇಕು. ಪ್ರತಿಪಕ್ಷಗಳ ಟೀಕೆ,ಟಿಪ್ಪಣಿ, ಪ್ರಚೋದನೆಗಳ ಬಗ್ಗೆ ಗಮನಹರಿಸಿ ಅದರ ಬಗ್ಗೆ ಚುನಾವಣಾ ಆಯೋಗ, ಜಿಲ್ಲಾಡಳಿತ, ಎಸ್ಪಿಗಳಿಗೆ ತ್ವರಿತವಾಗಿ ದೂರು ಸಲ್ಲಿಸಬೇಕೆಂದು ಹೇಳಿದರು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next