Advertisement

ಪಿಎಫ್ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಗೃಹ ಸಚಿವ ಬೊಮ್ಮಾಯಿ

02:57 PM Feb 19, 2021 | Team Udayavani |

ಬೆಂಗಳೂರು: ರಾಮಮಂದಿರ ಮತ್ತು ಆರ್ ಎಸ್ಎಸ್ ವಿರುದ್ಧ ಪಿಎಫ್ ಐ ನಾಯಕರು ನೀಡಿದ ಹೇಳಿಕೆ ವಿರುದ್ಧ ಗರಂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಿಎಫ್ ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ  ಉಲ್ಲಾಳದಲ್ಲಿ ಪಿಎಫ್ ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ. ದೇಶದ ಜನತೆಯನ್ನು ಒಡೆಯುವ ಪ್ರಯತ್ನದ ಹೇಳಿಕೆ ಅದಾಗಿದೆ ಎಂದರು.

ಇದನ್ನೂ ಓದಿ:‘ಸಮೋಸ ಬಿಸಿಯಿಲ್ಲ’ ಎಂದು ಹೋಟೆಲ್ ಸಿಬ್ಬಂದಿಯ ಕೊಲೆಯತ್ನ ಪ್ರಕರಣ: ಇಬ್ಬರ ಬಂಧನ

ಆರ್ ಎಸ್ಎಸ್ ಸಂಘಟನೆ ಒಂದು ದೇಶಭಕ್ತಿಯ ಪ್ರತೀಕ. ರಾಮ ಮಂದಿರ ನಿರ್ಮಿಸುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆ ಬಗ್ಗೆ ಪಿಎಫ್ ಐ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹ. ಪಿಎಫ್ ಐ ತನ್ನ ನಿಜ ಬಣ್ಣವನ್ನು ಹಲವು ಬಾರಿ ತೋರಿಸಿದೆ. ದೇಶ ವಿರೋಧಿ ಹೇಳಿಕೆ ನೀಡಿರುವ ಪಿಎಫ್ ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ಕಾಟಿಪಳ್ಳ:ರೌಡಿಶೀಟರ್ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣ ; 9 ಮಂದಿ ಸೆರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next