Advertisement

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿನ ಕ್ರಮ: ಪೊಲೀಸ್‌ ಕಮಿಷನರ್‌

11:37 PM Jan 26, 2020 | Team Udayavani |

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇರಿಸಿದ ಪ್ರಕರಣ ಕುರಿತಂತೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ಸುಳ್ಳು ಮತ್ತು ಆಧಾರ ರಹಿತ ಸುದ್ದಿಗಳನ್ನು ಹರಡುತ್ತಿದ್ದು, ಅಂತಹವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಆಯುಕ್ತ ಡಾ| ಹರ್ಷ ತಿಳಿಸಿದ್ದಾರೆ.

Advertisement

ಸುಳ್ಳು ವರದಿ ಹಬ್ಬಿಸಿದವರಿಗೆ ಈಗಾಗಲೇ ನೋಟಿಸ್‌ ನೀಡಲಾಗಿದೆ ಮತ್ತು ಅವರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು ಎಂದಿದ್ದಾರೆ.

ಸುಳ್ಳು ಸುದ್ದಿಗಳನ್ನು ಯಾರೇ ಹಬ್ಬಿಸಿದರೂ ಅಂತಹವರ ವಿರುದ್ಧ ಕಾನೂನು ಬಾಹಿರ ಕೃತ್ಯ ಕಾನೂನಿನಡಿ (ಯುಎಪಿಎ) ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಡಾ| ಹರ್ಷ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next