Advertisement

ಕೆಎಫ್‌ಡಿ ಲಸಿಕೆ ನೀಡಲು ಕಠಿಣ ಕ್ರಮ ಅಗತ್ಯ

06:25 PM Apr 16, 2020 | Suhan S |

ಸಿದ್ದಾಪುರ: ಮಂಗನ ಕಾಯಿಲೆ ಪೀಡಿತ ಪ್ರದೇಶದ ಎಲ್ಲಾ ಜನರಿಗೆ ರೋಗ ನಿರೋಧಕ ಲಸಿಕೆ ನೀಡಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು.

Advertisement

ತಾಪಂ ಸಭಾಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಮಂಗನ ಕಾಯಿಲೆ ಈ ಪ್ರದೇಶದಲ್ಲೇ ಯಾಕೆ ಬರುತ್ತದೆ ಅನ್ನುವುದರ ಬಗ್ಗೆ ಸಮಗ್ರ ಸಂಶೋಧನೆ ನಡೆಯುವ ಅಗತ್ಯವಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ್ದು, ಕೋವಿಡ್ 19 ಹಿನ್ನೆಲೆಯಲ್ಲಿ ಈ ವರದಿ ಬಗ್ಗೆ ಚರ್ಚಿಸಲು ಸಾಧ್ಯವಾಗಿಲ್ಲ ಎಂದರು.

ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಾಟ್‌ಸ್ಪಾಟ್‌ ಪ್ರದೇಶಗಳಲ್ಲಿ ಎಲ್ಲರಿಗೂ ಲಸಿಕೆ ನೀಡುವ ಕಾರ್ಯವಾಗಬೇಕು. ಈಗ ಕೇವಲ ಶೇ.30 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಲಸಿಕೆ ನೀಡಲು ಕಠಿಣ ಕ್ರಮ ತೆಗೆದುಕೊಂಡಾಗ ಮಾತ್ರ ಕಾಯಿಲೆ ತಡೆಗಟ್ಟಲು ಸಾಧ್ಯ. ಜನರು ಕಾಡುಗಳಿಗೆ ಹೋಗುವುದನ್ನು ಪರಿಸ್ಥಿತಿ ಅರ್ಥ ಮಾಡಿಕೊಂಡು ಕಡಿಮೆ ಮಾಡಬೇಕು ಎಂದರು.

ತಹಶೀಲ್ದಾರ್‌ ಮಂಜುಳಾ ಭಜಂತ್ರಿ, ತಾಪಂ ಇಒ ಪ್ರಶಾಂತರಾವ್‌, ತಾಲೂಕು ವೈದ್ಯಾಧಿಕಾರಿ ಡಾ| ಲಕ್ಷ್ಮೀಕಾಂತ, ಪಶುವೈದ್ಯ ಇಲಾಖೆಯ ಸಹನಿರ್ದೇಶಕ ಡಾ| ನಂದಕುಮಾರ ಪೈ, ಎಸಿಎಫ್‌ ಅಬ್ದುಲ್‌ ಅಜೀಜ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next