Advertisement

ಶರತ್‌ ಹತ್ಯೆ: ಹಿಂದೂ ಆಗಲಿ ಯಾರೇ ಆಗಲಿ ನಿರ್ದಾಕ್ಷಿಣ್ಯ ಕ್ರಮ

03:15 PM Jul 08, 2017 | Team Udayavani |

ಬೆಂಗಳೂರು : ಬಿ.ಸಿ.ರೋಡ್‌ನ‌ಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಹತ್ಯೆ ಪ್ರಕರಣ ಕ್ಕೆ ಸಂಬಂಧಿಸಿ ತಪ್ಪು ಮಾಡಿದವರು ಯಾರೇ ಇರಲಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರಿಗೆ , ಕಾನೂನು ಉಲ್ಲಂಘನೆ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡುವುದಿಲ್ಲ. ಕಾನೂನಿನನ್ವಯ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು. 

ತಪ್ಪನ್ನು ಹಿಂದೂಗಳೇ ಆಗಲಿ ಯಾರೇ ಮಾಡಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next