Advertisement

ಸರ್ವರಿಗೂ ನ್ಯಾಯ ಕೊಡಲು ಬೊಮ್ಮಾಯಿ ಸರ್ಕಾರದಿಂದ ಕಠಿಣ ಕಾನೂನು ಸುವ್ಯವಸ್ಥೆ: ಸಚಿವ ಕೋಟ

02:31 PM Apr 08, 2022 | Team Udayavani |

ಮೈಸೂರು: ಬಸವರಾಜ ಬೊಮ್ಮಾಯಿ ಸರ್ಕಾರವು ಸರ್ವರಿಗೂ ನ್ಯಾಯ ಕೊಡುವ ದಿಕ್ಕಿನಲ್ಲಿ ಕಠಿಣವಾದ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದೆ. ಹಿಜಾಬ್ ಸೇರಿದಂತೆ ಎಲ್ಲಾ ಪ್ರಕರಣವನ್ನು ಕಾನೂನು ಚೌಕಟ್ಟಿನಲ್ಲಿ ಬಗೆಹರಿಸಿದೆ. ಯಾರಿಗೂ ಆತಂಕ ಬೇಡ, ಎಲ್ಲದಕ್ಕೂ ನಾವು ಉತ್ತರ ಕೊಡಲು ಸಿದ್ಧವಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್ಎಸ್‌ ಸಂಘಟನೆಯನ್ನು ಅಲ್‌ ಖೈದಾಗೆ ಹೋಲಿಸಿ ಕಾಂಗ್ರೆಸ್ ಟೀಕೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ನವರು ಯಾವಾಗ ಬಿಜೆಪಿ ಹೊಗಳಿದ್ದಾರೆ? ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿದೆ ಎಂದು ಸಿದ್ದರಾಮಯ್ಯ, ಡಿ ಕೆ.ಶಿವಕುಮಾರ್ ಎಂದೂ ಹೇಳಿಲ್ಲ ಎಂದರು.

ಇದನ್ನೂ ಓದಿ:ಅಲ್ ಜವಾಹಿರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ: ಎಸ್.ಎ.ಹುಸೇನ್

ಮುಸ್ಲಿಂ ವ್ಯಾಪಾರಿಗಳ ವಿರುದ್ಧ ವ್ಯಾಪಾರ ಬಹಿಷ್ಕಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಕೋಟ, ಯಾರೋ ಒಬ್ಬರು ಟೀಕೆ, ಪ್ರತಿ ಟೀಕೆ ಮಾಡಿರುತ್ತಾರೆ. ಆದರೆ ಸರ್ಕಾರ ಎಲ್ಲರನ್ನು ಸಮಾನವಾಗಿ ತೆಗೆದುಕೊಂಡು ಹೋಗುತ್ತದೆ. ಇದರಲ್ಲಿ ಮೂಗು ತೂರಿಸಲು ಸರ್ಕಾರಕ್ಕೆ ಪ್ರಚಾರದ ಹುಚ್ಚಿಲ್ಲ. ಸರ್ಕಾರ ಜನರ ಭಾವನೆ ಅರ್ಥ ಮಾಡಿಕೊಂಡು ನಡೆಯುತ್ತಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next