Advertisement

ದೇಶದ್ರೋಹಿಗಳಿಗೆ ಕಠಿಣ ಕಾನೂನು ಕ್ರಮ

11:37 PM Feb 22, 2020 | Lakshmi GovindaRaj |

ಪುತ್ತೂರು: ನಮ್ಮ ದೇಶದಲ್ಲಿ ಹುಟ್ಟಿ, ಇಲ್ಲಿನ ನೀರು, ಆಹಾರ ಸಹಿತ ಎಲ್ಲ ಅವಕಾಶ ಬಳಸಿಕೊಂಡು, ಪಾಕಿಸ್ತಾನಕ್ಕೆ ಜೈಕಾರ ಹಾಕುವ ದೇಶದ್ರೋಹಿಗಳಿಗೆ ಕಠಿಣ ಕಾನೂನು ಕ್ರಮದ ಅನಿವಾರ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

Advertisement

ಪುತ್ತೂರಿನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿ, ರಾಜಕೀಯವಾಗಿ ಯಾವುದೇ ಪಕ್ಷಗಳಿಗೆ ಬೈಯ್ಯಬಹುದು. ಅದು ಪ್ರಜಾಪ್ರಭುತ್ವದ ಹಕ್ಕು. ಆದರೆ, ಈ ದೇಶದಲ್ಲಿದ್ದು ಭಾರತಮಾತೆಗೆ ಜೈಕಾರ ಹಾಕುವುದರ ಬದಲು ದೇಶದ್ರೋಹದ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಇಂತಹ ವ್ಯಕ್ತಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಅವರ ಹಿಂದೆ ಯಾರಿದ್ದಾರೆ ಎಂಬ ಕುರಿತೂ ತನಿಖೆ ನಡೆಸಬೇಕಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲು ಅವಕಾಶ ಮಾಡಿಕೊಟ್ಟ ಕಾರ್ಯಕ್ರಮದ ಸಂಘಟಕರ ಮೇಲೂ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next