Advertisement

ಇನ್ನೊಂದು ವಾರ ಕಟ್ಟುನಿಟ್ಟಾಗಿರಲು ಸೂಚನೆ

05:42 PM Jun 14, 2021 | Team Udayavani |

ಕಾರವಾರ: ಉತ್ತರ ಕನ್ನಡದಲ್ಲಿ ಕೋವಿಡ್‌ ಇಳಿಮುಖವಾಗಿದ್ದು, ಸಾರ್ವಜನಿಕರು ಇನ್ನೊಂದು ವಾರ ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಗತ್ಯ ಕೆಲಸಗಳಿಗೆ ಮಾತ್ರ ಮಾಸ್ಕ್ ಧರಿಸಿಯೇ ಓಡಾಡಬೇಕು. ನಂತರದ ದಿನಗಳಲ್ಲಿ ಕೋವಿಡ್‌ ಬಗ್ಗೆ ಜಾಗೃತಿ ಮನಸಲ್ಲಿ ಇಟ್ಟುಕೊಂಡರೆ ಜನ ಜೀವನ ಸಹಜ ಸ್ಥಿತಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅಭಿಪ್ರಾಯಪಟ್ಟರು.

Advertisement

ರಾಜ್ಯ ಸರ್ಕಾರ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಪರಿಷ್ಕೃತ ಆದೇಶದನ್ವಯ ಜಿಲ್ಲೆಯಲ್ಲಿ ಜೂ.21 ರವರೆಗೆ ಸಾರ್ವಜನಿಕರ ಅಗತ್ಯ ವಸ್ತುಗಳ ಖರೀದಿಗೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.

ಡಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ರವಿವಾರ ಪತ್ರಕರ್ತರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ ಮಾರ್ಗಸೂಚಿ ಪಾಲನೆಯೊಂದಿಗೆ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು ಮತ್ತು ಪ್ರಾಣಿಗಳ ಆಹಾರದೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ ಎಂದರು.

ಆಪ್ಟಿಕಲ್‌ ಅಂಗಡಿಗಳು, ರಸ್ತೆ ಬದಿ ಮಾರಾಟಗಾರರಿಗೆ, ಸಾರ್ವಜನಿಕ ವಿತರಣಾ ವ್ಯವಸ್ಥೆ ಅಂಗಡಿಕಾರರಿಗೆ ಹಾಗೂ ಮದ್ಯದಂಗಡಿ ಮತ್ತು ಮಳಿಗೆಗಳಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅನುಮತಿಸಿದೆ ಎಂದರು. ಎಲ್ಲಾ ಉತ್ಪಾದನಾ ಘಟಕಗಳು, ಸ್ಥಾಪನೆ, ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ ಶೇ.50 ರೊಂದಿಗೆ ಕಾರ್ಯನಿರ್ವಹಿಸಬೇಕು. ಕೊವಿಡ್‌ ಘಟಕಗಳು, ಸಂಸ್ಥೆಗಳು, ಗಾಮೆಂìಟ್‌ ತಯಾರಿಕೆಯಲ್ಲಿ ತೊಡಗಿರುವ ಕೈಗಾರಿಕೆಗಳು ಶೇ.30 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ನುಡಿದರು.

ಮನೆಗಳ ಹೊರಗಿನ ವ್ಯಕ್ತಿಗಳ ಚಲನೆ ಕಡಿಮೆ ಮಾಡಲು ಎಲ್ಲಾ ಅಗತ್ಯ ವಸ್ತುಗಳನ್ನು ಹೋಮ್‌ ಡಿಲೇವರಿ ಪ್ರೋತ್ಸಾಹಿಸಲಾಗುತ್ತದೆ. ನಿರ್ಮಾಣ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಎಲ್ಲಾ ಅಂಗಡಿಗಳು, ಸಂಸ್ಥೆಗಳು, ವಿಶೇಷವಾಗಿ ಸಿಮೆಂಟ್‌ ಮತ್ತು ಉಕ್ಕು ಮುಂತಾದ ಅಂಗಡಿಗಳಿಗೆ ಕೋವಿಡ್‌ ಸೂಕ್ತ ನಡವಳಿಕೆ ಪಾಲನೆಯೊಂದಿಗೆ ಕಂಟೈನ್ಮೆಂಟ್‌ ಝೋನ್‌ಗಳ ಹೊರಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಎಂದರು.

Advertisement

ಕೋವಿಡ್‌ ಸೂಕ್ತ ನಡವಳಿಕೆ ಕಟ್ಟುನಿಟ್ಟಾಗಿ ಪಾಲಿಸುವ ನಡಿಗೆ ಮತ್ತು ಜಾಗಿಂಗ್‌ಗೆ ಬೆಳಗ್ಗೆ 5 ರಿಂದ 10 ರವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿಯಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ಹೇಳಿದರು. ಟ್ಯಾಕ್ಸಿಗಳು ಮತ್ತು ಆಟೋ ರಿûಾಗಳನ್ನು ನಿರ್ವಹಿಸಲು ಅನುಮತಿಯಿದ್ದು, ಗರಿಷ್ಠ 2 ಪ್ರಯಾಣಿಕರನ್ನು ಮಾತ್ರ ಸಾಗಿಸಬಹುದು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಕಚೇರಿಗಳ ಜೊತೆಗೆ, ಕೃಷಿ ಮತ್ತು ಸಂಬಂಧಿತ ಕಚೇರಿಗಳು, ಪಿಡಬ್ಲುಡಿ, ವಸತಿ, ಆರ್‌ಟಿಒಎಸ್‌, ಸಹಕಾರ, ನಬಾರ್ಡ್‌ ಮತ್ತು ಕಂದಾಯ ಇಲಾಖೆ ಕಚೇರಿಗಳು ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯಿದೆ. ಉತ್ಪಾದನೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿ ಸೇರಿದಂತೆ ನಿರ್ಮಾಣ ಚಟುವಟಿಕೆಗಳು ದುರಸ್ತಿ ಕಾರ್ಯಗಳನ್ನು ಅನುಮತಿಸಲಾಗಿದೆ ಎಂದೂ ಹೇಳಿದರು.

ಜಿಲ್ಲೆಗೆ ಸೀಮಿತ ಕ್ರಮಗಳು: ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರದ ಅದೇಶದನ್ವಯ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದನ್ನು ನಿಷೇಧಿಸಿದೆ. ತಹಶೀಲ್ದಾರರು ಆಯಾ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಅಂತಹ ಪ್ರದೇಶಗಳನ್ನು ಮೈಕ್ರೋ ಕಂಟೈನ್ಮೆಂಟ್‌ ವಲಯವನ್ನಾಗಿ ಘೋಷಿಸಿ ಸಂಪೂರ್ಣ ಲಾಕ್‌ ಡೌನ್‌ ಮಾಡಬಹುದು. ಇಂತಹ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸಲು ಸ್ಥಳೀಯ ಆಡಳಿತ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.

ರಾತ್ರಿ ಕರ್ಫ್ಯೂ: ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಅನ್ವಯ ಜೂ.21 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ವ್ಯಕ್ತಿಗಳ ಚಲನೆಯನ್ನು ಸಂಜೆ 7 ರಿಂದ ಬೆಳಗ್ಗೆ 5 ರವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳು ಮತ್ತು ಅವರ ಪರಿಚಾರಕರು, ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿ ನೀಡಲಾಗುತ್ತದೆ.

ವಾರಾಂತ್ಯದ ಕರ್ಫ್ಯೂ: ಶುಕ್ರವಾರ ರಾತ್ರಿಯಿಂದ ಶನಿವಾರ, ರವಿವಾರ ವಾರ್ಯಂತದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸೋಮವಾರ ಎಂದಿನಂತೆ ಜನ ಜೀವನ ಇರಲಿದ್ದು, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ ಎಂದರು. ಎಡಿಸಿ ಕೃಷ್ಣಮೂರ್ತಿ, ಜಿಪಂ ಸಿಇಒ ಪ್ರಿಯಂಕಾ ಎಂ., ಎಸ್ಪಿ ಶಿವಪ್ರಕಾಶ್‌ ದೇವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next