Advertisement

ಜೆಡಿಎಸ್‌ ಅಧಿಕಾರಕ್ಕೆ ತರಲು ಶ್ರಮಿಸಿ

04:45 PM Apr 26, 2022 | Team Udayavani |

ಮೊಳಕಾಲ್ಮೂರು: ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕಿದೆ. ಅದಕ್ಕಾಗಿ ಜೆಡಿಎಸ್‌ ಗೆಲುವಿಗೆ ಸಂಘಟಿತರಾಗಿ ಶ್ರಮಿಸಬೇಕು ಎಂದು ಪಕ್ಷದ ಮುಖಂಡ ಅನಿಲ್‌ಕುಮಾರ್‌ ಹೇಳಿದರು.

Advertisement

ತಾಲೂಕಿನ ಹಾನಗಲ್‌ ಪ್ರವಾಸಿಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜನತಾ ಜಲಧಾರೆ ಯೋಜನೆಯ ರಥಯಾತ್ರೆಗೆ ಏ. 28ರಂದು ನಾಯಕನಹಟ್ಟಿಯಲ್ಲಿ ಚಾಲನೆ ದೊರೆಯಲಿದೆ. ಜನತಾ ಜಲಧಾರೆ ಯೋಜನೆಯ ರಥಯಾತ್ರೆಯನ್ನು ಅದ್ಧೂರಿ ಮೆರವಣಿಗೆಯೊಂದಿಗೆ ತಾಲೂಕಿನ ರಾಂಪುರ ಗ್ರಾಮಕ್ಕೆ ಕರೆತಂದು ಸಮಾರಂಭ ಆಯೋಜಿಸಲಾಗುವುದು. ನಂತರ ಈ ರಥಯಾತ್ರೆಯನ್ನು ತಾಲೂಕಿನ ಕೇಂದ್ರಸ್ಥಾನವಾದ ಮೊಳಕಾಲ್ಮೂರು ಪಟ್ಟಣಕ್ಕೆ ಕರೆ ತಂದು ಬೃಹತ್‌ ಸಮಾರಂಭ ಹಮ್ಮಿಕೊಳ್ಳಲಾಗುವುದು. ತಾಲೂಕಿನ ಕೊಂಡ್ಲಹಳ್ಳಿ ಗ್ರಾಮ ಮಾರ್ಗವಾಗಿ ಚಳ್ಳಕೆರೆ ತಾಲೂಕಿನ ತಳುಕಿನಲ್ಲಿ ಯಾತ್ರಯನ್ನು ಚಳ್ಳಕೆರೆ ತಾಲೂಕಿನವರಿಗೆ ಹಸ್ತಾಂತರಿಸಲಾಗುವುದು ಎಂದರು.

ಜನತಾ ಜಲಧಾರೆ ಯೋಜನೆಯ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ಶುದ್ಧ ನೀರು ಹಾಗೂ ಕೃಷಿಗೆ ಸಮರ್ಪಕವಾದ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯದಲ್ಲಿ ರೈತರಿಗೆ ಕೃಷಿ ಕೈಗೊಳ್ಳಲು ಸಮರ್ಪಕವಾಗಿ ನೀರು ಒದಗಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದಲ್ಲಿ ರೈತರ ಆದಾಯ ದ್ವಿಗುಣಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಮುಖ್ಯಮಂತ್ರಿಯಾಗಲು ಕುಮಾರಸ್ವಾಮಿಯವರಿಗೆ ಸಂಪೂರ್ಣ ಸಹಕಾರ ನೀಡಿದ್ದಲ್ಲಿ ಜಲಧಾರೆ ಯೋಜನೆ ಹಾಗೂ ಪಂಚರತ್ನ ಯೋಜನೆ ಜಾರಿಗೊಳಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಬಿ.ಜಿ. ಕೆರೆಯ ಜಿ. ಮಂಜುನಾಥ ಮಾತನಾಡಿ, ರಾಜ್ಯದಲ್ಲಿ ರೈತರು ಹಾಗೂ ಕಾರ್ಮಿಕರ ಮೇಲೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಪಾರ ವಾತ್ಸಲ್ಯ ಹೊಂದಿದ್ದಾರೆ. ಮುಖ್ಯವಾಗಿ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಸಣ್ಣ ಪುಟ್ಟ ಜಮೀನುಗಳಿಗೆ ಪೈಪ್‌ಲೈನ್‌ ಇಲ್ಲವೇ ಕಾಲುವೆ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ಚಿಂತನೆ ಹೊಂದಿದ್ದಾರೆ. ಅಲ್ಲದೆ ಕೃಷಿಯೆತರ ಚಟುವಟಿಕೆಗಳಿಗೂ ಹೆಚ್ಚಿನ ಅವಕಾಶಗಳನ್ನು ನೀಡಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರೆತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದರು. ಜನಪರ ಯೋಜನೆಗಳ ಜಾರಿಗೆ ಜಾತ್ಯತೀತವಾಗಿ ಪಕ್ಷವನ್ನು ಸಂಘಟಿಸಿ ಗೆಲುವಿಗೆ ಶ್ರಮಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಜೆಡಿಎಸ್‌ ಜಿಲ್ಲಾ ಸಮಿತಿಯ ಕಾಲುವೆಹಳ್ಳಿ ರಂಗಸ್ವಾಮಿ, ವೆಂಕಟೇಶ್‌, ತಾಲೂಕು ಉಪಾಧ್ಯಕ್ಷ ಮಹಮ್ಮದ್‌ ಜಕ್ರಿಯಾ, ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಇಕ್ಬಾಲ್‌, ಕಾರ್ಯಾಧ್ಯಕ್ಷ ಯರಗುಂಟಪ್ಪ, ಯುವ ಘಟಕದ ಅಧ್ಯಕ್ಷ ಗೋವಿಂದ, ಪಕ್ಷದ ಪದಾಧಿ ಕಾರಿಗಳಾದ ಹನುಮಂತನಹಳ್ಳಿ ನಾಗರಾಜ್‌, ತಿಪ್ಪೇಸ್ವಾಮಿ, ತಿಪ್ಪೇಶ್‌, ನಾಗೇಂದ್ರ, ಸಯ್ಯದ್‌ ಹಮೀದ್‌ ಸಾಬ್‌, ಜಿ.ಜೆ. ನಾಗರಾಜ್‌, ಬಸಾಪುರದ ಜಯಪಾಲ್‌, ಮಂಜುನಾಥ ಮೊದಲಾದವರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next