Advertisement

ವೇಕಾನಂದರ ಕನಸು ನನಸಾಗಿಸಲು ಶ್ರಮಿಸಿ

03:36 PM Jan 14, 2021 | Team Udayavani |

ದಾವಣಗೆರೆ: ಸ್ವದೇಶಿ ಜಾಗೃತಿ ಮತ್ತು ಸ್ವಾವಲಂಬನೆಯ ಬದುಕನ್ನು ರೂಢಿಸಿಕೊಂಡು ನಮ್ಮ ಸಾಮರ್ಥ್ಯವನ್ನು ಅರಿತು ಮುನ್ನಡೆದರೆ ಭಾರತವನ್ನು ವಿಶ್ವದ ಮಹಾನ್‌ ರಾಷ್ಟ್ರವನ್ನಾಗಿ ಪರಿವರ್ತಿಸಲು ಸಾಧ್ಯ ಎಂದು ಆದರ್ಶ ಗೋಖಲೆ ಹೇಳಿದರು.

Advertisement

ದಾವಣಗೆರೆ ವಿಶ್ವವಿದ್ಯಾಲಯ ಮತ್ತು ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ  158ನೇ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ “ಯುವ ಧ್ವನಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತಕ್ಕೆ ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳನ್ನು ತಡೆಯುವ, ವಿರುದ್ಧ ಹೋರಾಡುವ ಅನಿವಾರ್ಯತೆ ಇದೆ. ದೇಶದ ಪ್ರತಿಯೊಬ್ಬರೂ ಸ್ವದೇಶಿ ವಸ್ತುಗಳನ್ನೇ ಬಳಸಿ ಸ್ವಾಭಿಮಾನದಿಂದ ಸ್ವಾವಲಂಬನೆಯ ಬದುಕು ಬಾಳಿದರೆ ಸ್ವಾಮಿ ವಿವೇಕಾನಂದರು ಕಂಡ ಕನಸಿನ ಭಾರತವನ್ನು ನಿರ್ಮಿಸಬಹುದು ಎಂದರು.

ದೇಶದಲ್ಲಿರುವ ಪ್ರಸ್ತುತ ಶಿಕ್ಷಣವು ಮಕ್ಕಳಿಗೆ ಪ್ರಮಾಣಪತ್ರ ನೀಡುವ ಕಲಿಕೆಯಾಗಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಮಕ್ಕಳಿಗೆ ಅನುಭವ ಆಧಾರಿತ ಬದುಕನ್ನು ಕಟ್ಟಿಕೊಡುವ, ಸಾಮಾಜಿಕ ಜವಾಬ್ದಾರಿ, ನೈತಿಕ ಮೌಲ್ಯಗಳನ್ನು ಕಲಿಸಿ, ಭವಿಷ್ಯವನ್ನು ರೂಪಿಸಿಕೊಳ್ಳುವ ಪ್ರಜ್ಞಾವಂತ, ಸಮಾಜಮುಖೀ ವ್ಯಕ್ತಿಗಳನ್ನು ನಿರ್ಮಿಸಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಪರಿಕಲ್ಪನೆಯ ಸಮಾಜದ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು: ಡಿ ಕೆ ಶಿವಕುಮಾರ್ ಗುಡುಗು

Advertisement

ಸ್ವಾಮಿ ವಿವೇಕಾನಂದರ ಸಲಹೆಯಂತೆ ಪ್ರತಿಯೊಬ್ಬ ವ್ಯಕ್ತಿಯ ಗುರಿ ಮತ್ತು ಯೋಚನೆ ಒಂದಾಗಿದ್ದಾಗ ಮಾತ್ರ ಯಶಸ್ಸು ಸಾ  ಧಿಸಲು ಸಾಧ್ಯ. ಆದರೆ ಭಾರತೀಯರಲ್ಲಿ ಯೋಚನೆ ಮತ್ತು ಗುರಿ ಭಿನ್ನವಾಗಿದ್ದರಿಂದ ಶತಮಾನಗಳ ಕಾಲ ಪರಕೀಯರು ದೇಶವನ್ನು ಆಳುವಂತಾಯಿತು. ಅವರ ದಾಸ್ಯದಿಂದ ದೇಶದ ಸಂಪತ್ತು, ಸಂಪನ್ಮೂಲಗಳು ನಷ್ಟವಾಗಿ ಈಗಲೂ ಅದರ ಪರಿಣಾಮವನ್ನು ಎದುರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ದೇಶೀಯತೆಯ ಭಾವನೆಯೊಂದಿಗೆ ಉನ್ನತ ಯೋಚನೆಗಳೊಂದಿಗೆ ನಿರ್ದಿಷ್ಟ ಗುರಿಯತ್ತ ಚಿಂತನೆ ಮಾಡಿ, ಅನುಷ್ಠಾನಕ್ಕೆ ತರಲು ಎಲ್ಲರೂ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಮಾತನಾಡಿ, ವೈಯಕ್ತಿಕ ಹಿತಾಸಕ್ತಿ ಬಿಟ್ಟು ಜನಪರ ಕಾಳಜಿಯಿಂದ ಸಮಾಜದ ಹಿತಕ್ಕಾಗಿ ದುಡಿದ ವ್ಯಕ್ತಿ ಸಾಧನೆಯ ಎತ್ತರಕ್ಕೆ ಏರುವರು. ಸಮಾಜ ಗುರುತಿಸಿ ಗೌರವಿಸುವುದು. ಓದು, ಅಧ್ಯಯನದಲ್ಲಿಯೂ ಗುರಿ, ಉದ್ದೇಶಗಳನ್ನು ಒಂದಾಗಿ ಮಾಡಿಕೊಂಡರೆ ಉತ್ತಮ ಸಾಧನೆ ಮಾಡಬಹುದು ಎಂದು ತಿಳಿಸಿದರು. ಕುಲಸಚಿವ ಪ್ರೊ| ಬಸವರಾಜ ಬಣಕಾರ, ಪ್ರತಿಯೊಬ್ಬರಲ್ಲಿಯೂ ವಿಶಿಷ್ಟ ವ್ಯಕ್ತಿತ್ವ ಇರುತ್ತದೆ. ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಉತ್ತಮ ಕೆಲಸಗಳಿಗೆ ಬಳಸಿಕೊಂಡಾಗ ಯಶಸ್ಸಿನ ಹಾದಿ ಸುಲಭವಾಗುತ್ತದೆ. ಅದು ವಿವೇಕಾನಂದರ ಆದರ್ಶದ ಭಾರತ ಮರುಸೃಷ್ಟಿಗೆ ನೆರವಾಗುತ್ತದೆ ಎಂದು ನುಡಿದರು.

ಪರೀಕ್ಷಾಂಗ ಕುಲಸಚಿವೆ ಪ್ರೊ| ಎಚ್‌.ಎಸ್‌. ಅನಿತಾ, ಹಣಕಾಸು ಅ ಧಿಕಾರಿ ಪ್ರೊ| ಗೋಪಾಲ ಎಂ. ಅಡವಿರಾವ್‌, ಹಿಂದುಳಿದ ವರ್ಗಗಳ ಸಮಿತಿ ಸಂಯೋಜನಾ ಧಿಕಾರಿ ಕುಮಾರ ಸಿದ್ದಮಲ್ಲಪ್ಪ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next