Advertisement

ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಹತ್ಯೆ

10:18 PM Apr 03, 2019 | Lakshmi GovindaRaju |

ವಾರಾಣಸಿ: ಬನಾರಸ್‌ ಹಿಂದೂ ವಿವಿಯಲ್ಲಿ ಅಮಾನತುಗೊಂಡಿದ್ದ ವಿದ್ಯಾರ್ಥಿ ಗೌರವ್‌ ಸಿಂಗ್‌ ಅವರನ್ನು ವಿವಿ ಕ್ಯಾಂಪಸ್‌ನ ಹಾಸ್ಟೆಲ್‌ ಹೊರಗೆಯೇ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Advertisement

ಘಟನೆ ಸಂಬಂಧ ವಿಶ್ವವಿದ್ಯಾಲಯದ ಮುಖ್ಯ ಪ್ರಾಕ್ಟರ್‌ ರೊಯಾನಾ ಸಿಂಗ್‌ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ. ಜತೆಗೆ, ಅಹಿತಕರ ಘಟನೆ ನಡೆಯದಂತೆ ವಿವಿ ಆವರಣದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. 2017ರಲ್ಲಿ ವಿವಿಯಲ್ಲಿ ನಡೆದ ಗಲಭೆಯಲ್ಲಿ ಗೌರವ್‌ ಪಾತ್ರ ಇದ್ದ ಹಿನ್ನೆಲೆಯಲ್ಲಿ ಆತನನ್ನು ಅಮಾನತು ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next