Advertisement

ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

12:12 AM Apr 29, 2023 | Team Udayavani |

ಬೆಳ್ತಂಗಡಿ: ಖಾಸಗಿ ಕಾಲೇಜೊಂದರಲ್ಲಿ ನೀಟ್‌ ವಿದ್ಯಾಭ್ಯಾಸ ಮಾಡಲೆಂದು ಬಂದ ವಿದ್ಯಾರ್ಥಿನಿ ಕಡಿಮೆ ಅಂಕದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 28 ರಂದು ನಡೆದಿದೆ.

Advertisement

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿ ಉಮೆ ಉಜ್ಮಾ ಎಸ್‌. (19) ಮೃತಪಟ್ಟಾಕೆ. ಕುವೆಟ್ಟು ಸಮೀಪದ ಖಾಸಗಿ ಕಾಲೇಜೊಂದರಲ್ಲಿ ಮೆಡಿಕಲ್‌ ಕೋರ್ಸ್‌ ಪ್ರವೇಶಕ್ಕಾಗಿ ಲಾಂಗ್‌ ಟರ್ಮ್ ನೀಟ್‌ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಇಲ್ಲಿನ ಕಾಲೇಜು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಆದರೆ ಎ. 28ರಂದು ರೂಮಿನಿಂದ ಹೊರಕ್ಕೆ ಹೋದವಳು ಈ ಹಿಂದೆ ನಡೆದ ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ವಿಚಾರದಲ್ಲಿ ಮನನೊಂದು ಮತ್ತು ಮುಂಬರುವ ನೀಟ್‌ ಪರೀಕ್ಷೆಯ ಭಯದಿಂದ ಅಥವಾ ಇನ್ನಾವುದೋ ಕಾರಣದಿಂದ ಜೀವನದಲ್ಲಿ ಜುಗುಪ್ಸೆಗೊಂಡು ಕಟ್ಟಡದ ಮೇಲಿನಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next