Advertisement

ವಿದ್ಯಾರ್ಥಿನಿ ಸಾವು: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

12:50 PM Dec 27, 2019 | Team Udayavani |

ಹಾಸನ: ನಗರದ ಸರ್ಕಾರಿ ವಿಜ್ಞಾನ ಕಾಲೇಜು ವಿದ್ಯಾರ್ಥಿನಿ ಶರಣ್ಯಾಳ ಅನುಮಾನಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಡೀಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

Advertisement

ಸರ್ಕಾರಿ ವಿಜ್ಞಾನ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಶರಣ್ಯಾ ಶವ ನಗರದ ಸತ್ಯಮಂಗಲ ಕೆರೆಯಲ್ಲಿ ಬುಧವಾರ ಪತ್ತೆಯಾಗಿತ್ತು. ಶವದ ಮೇಲೆ ಗಾಯಗಳ ಗುರುತುಗಳಿದ್ದು, ಆಕೆ ಕೊಲೆಯಾಗಿರಬಹುದೆಂಬ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಪಡಿಸಿದರು.

ಎಬಿವಿಪಿ ಮುಖಂಡರಾದ ಪ್ರಮೋದ್‌ ಕುಮಾರ್‌, ಪ್ರವೀಣ್‌, ಭರತ್‌, ಚೇತನ್‌, ದರ್ಶನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

Advertisement

Udayavani is now on Telegram. Click here to join our channel and stay updated with the latest news.

Next