Advertisement

ವಿದ್ಯಾರ್ಥಿನಿ ಸಾವು: ಆರೋಪಿ ನ್ಯಾಯಾಂಗ ಬಂಧನ ವಿಸ್ತರಣೆ

11:25 PM May 14, 2019 | Team Udayavani |

ರಾಯಚೂರು: ನಗರದ ನವೋದಯ ಕಾಲೇಜಿನ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣದ ಪ್ರಮುಖ ಆರೋಪಿ ಸುದರ್ಶನ ಯಾದವ ನ್ಯಾಯಾಂಗ ಬಂಧನವನ್ನು ಮೇ 27ರವರೆಗೆ ವಿಸ್ತರಿಸಲಾಗಿದೆ.

Advertisement

ಏ.18ರಿಂದ ಸುದರ್ಶನ ಯಾದವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಮಧ್ಯೆ ಸಿಐಡಿ ಪೊಲೀಸರು 9 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ನ್ಯಾಯಾಧಿಧೀಶರ ಎದುರು ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಮೇ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಮಂಗಳವಾರ ವಿಚಾರಣೆ ನಡೆಸಬೇಕಿತ್ತು. ನ್ಯಾಯಾ ಧೀಶರು ಇಲ್ಲದ ಕಾರಣ ಆರೋಪಿಯ ನ್ಯಾಯಾಂಗ ಬಂಧನವನ್ನು ಮೇ 27ರವರೆಗೆ ವಿಸ್ತರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next