Advertisement

ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

09:52 PM Jul 30, 2023 | Team Udayavani |

ಮಂಗಳೂರು: ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರವಿವಾರ ನಗರದ ಕದ್ರಿ ಶಿವಭಾಗ್‌ನಲ್ಲಿ ಸಂಭವಿಸಿದೆ.

Advertisement

ಮೂಲತಃ ಅಡ್ಯಾರ್‌, ಪ್ರಸ್ತುತ ಕದ್ರಿ ಶಿವಭಾಗ್‌ ನಿವಾಸಿ, ಮೆಡಿಕಲ್‌ ಕಾಲೇಜು ವಿದ್ಯಾರ್ಥಿ ಸಮಯ್‌ (21) ಮೃತಪಟ್ಟವರು.

ಸಮಯ್‌ ಅವರು ಬಾಲ್ಕನಿಯಲ್ಲಿ ಓದುತ್ತಿದ್ದಾಗ ಅವರ ತಾಯಿ ಕಾರ್‌ ವಾಷ್‌ ಮಾಡಲು ನೆಲಮಹಡಿಗೆ ಹೋಗೋಣ ಎಂದಿದ್ದರು. ತಾಯಿ ಕೆಳಗೆ ಹೋಗಿದ್ದರು. ಸಮಯ್‌ ಬಾಲ್ಕನಿಯಿಂದ ಬಾಗಿ ತಾಯಿಯೊಂದಿಗೆ ಮಾತನಾಡುತ್ತಿದ್ದಾಗ ಜಾರಿ ಕೆಳಗೆ ಬಿದ್ದಿದ್ದಾರೆ. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಪ್ರಯೋಜನವಾಗಲಿಲ್ಲ. ಮಳೆ ನೀರಿನಿಂದಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಸಮಯ್‌ ಅವರ ತಂದೆ ಸಿವಿಲ್‌ ಎಂಜಿನಿಯರ್‌ ಆಗಿದ್ದು, ತಾಯಿ ಮನೆಯೊಡತಿಯಾಗಿದ್ದಾರೆ. ಈ ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್‌ ಹಿರಿಯವರು.

ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next