Advertisement

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

03:27 PM Dec 10, 2021 | Team Udayavani |

ಬೆಳ್ತಂಗಡಿ: ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

Advertisement

ಮೂಡಿಗೆರೆ ನಿವಾಸಿಯಾಗಿರುವ, ಗುರುದೇವ ಕಾಲೇಜು ವಿದ್ಯಾರ್ಥಿ ಸಮರ್ಥ್ (16) ಮೃತ ದುರ್ದೈವಿ.

ಮಧ್ಯಾಹ್ನ ವರೆಗೆ ತರಗತಿಯಲ್ಲಿದ್ದು, ಬಳಿಕ ಸ್ನಾನಕ್ಕೆಂದು ತೆರಳಿದ್ದರು. ಸಮರ್ಥ್ ನೀರಿನಲ್ಲಿ ಮುಳುಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾದರೂ, ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ದ್ವಿತೀಯ ಪಿಯುಸಿಯವರಿಗೆ ಪರೀಕ್ಷೆ ಇದ್ದುದರಿಂದ ಪ್ರಥಮ ಪಿಯುಸಿಯವರಿಗೆಮಧ್ಯಾಹ್ನ ಬಳಿಕ ತರಗತಿ ನಿಗದಿಯಾಗಿತ್ತು. ಪಿಜಿಯೊಂದರಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿ ಸಮರ್ಥ್ ಮಧ್ಯಾಹ್ನ ಬಳಿಕ ನದಿಯಲ್ಲಿ ಸ್ನಾನ ಮಾಡಿ ಕಾಲೇಜಿಗೆ ತೆರಳುಲು ಮುಂದಾಗಿದ್ದರು.  ಆದರೆ ನದಿ ನೀರಲ್ಲಿ ಮುಳುಗಿ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸ್ಥಳಕ್ಕೆ ಭೇಟಿ ನೀಡಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು. ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next