Advertisement

Bangalore: ಖಾಸಗಿ ಕಾಲೇಜು ಆಡಳಿತ ಮಂಡಳಿ ಕಿರುಕುಳ? ವಿದ್ಯಾರ್ಥಿ ಆತ್ಮಹತ್ಯೆ

02:22 PM Dec 30, 2023 | Team Udayavani |

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಹೋಟೆಲ್‌ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಯೊಬ್ಬ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಲೇಜಿನಲ್ಲಿ ನೀಡಿದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪಾಲಕರು ಆರೋಪಿಸಿದ್ದಾರೆ.

Advertisement

ನಾಗರಬಾವಿ ನಿವಾಸಿ ನಿಖಿಲ್‌ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.ನಿಖಿಲ್‌ ಮನೆಯಲ್ಲಿದ್ದ ಮಾತ್ರೆ ಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದ. ಕೂಡಲೇ ಆತನನ್ನು ನಾಗರಬಾವಿಯ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡ ಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿ ರೆಳೆದಿದ್ದಾನೆ. ಇತ್ತ ಕಾಲೇಜು ಆಡಳಿತ ಮಂಡಳಿ ಕಿರು ಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ನಿಖೀಲ್‌ ಪಾಲಕರು ಚಂದ್ರಾಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.ಚಂದ್ರಾಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜಿನ ಡೀನ್‌ ವಿರುದ್ಧ ಆಕ್ರೋಶ: ಕಾಲೇಜಿನ ಡೀನ್‌ ಒಬ್ಬರು ಕಿರುಕುಳ ನೀಡುತ್ತಿದ್ದ ವಿಚಾರವನ್ನು ನಿಖೀಲ್‌ ತಿಳಿಸಿದ್ದ. ಕಿರುಕುಳದಿಂದ ಬೇಸತ್ತು ಮನೆಯಲ್ಲಿದ್ದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಈ ಮೂಲಕ ಕಾಲೇಜಿನವರೇ ನನ್ನ ಮಗನನ್ನು ಕೊಂದಿದ್ದಾರೆ. ಜಗಳ ಮಾಡಿರುವ ವಿಚಾರದಲ್ಲಿ ನಿಖಿಲ್‌ನನ್ನು ಅಮಾನತು ಮಾಡಿದ್ದರು. ಆ ವಿಚಾರದಲ್ಲಿ ಚರ್ಚಿಸಲು ಕಾಲೇಜು ಬಳಿಗೆ ತೆರಳಿದಾಗ ಪಾಲಕರ ಎದುರು ನಿಖೀಲ್‌ಗೆ ಅವಮಾನ ಮಾಡಿದ್ದಾರೆ ಎಂದು ವಿದ್ಯಾರ್ಥಿಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಾಲೇಜಿನ ಡೀನ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಿಖಿಲ್‌ಗೆ ಕಿರುಕುಳ ಕೊಟ್ಟವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಲೇಜು ಎದುರು ನಿಖೀಲ್‌ ಮೃತದೇಹ ಇರಿಸಿ ಪಾಲಕರು ಹಾಗೂ ಕುಟುಂಬಸ್ಥರು ಪ್ರತಿಭಟನೆ ನಡೆಸಲು ಮುಂದಾದರು. ನಂತರ ಪೊಲೀಸರ ಮನವಿಗೆ ಮಣಿದು ಅದನ್ನು ಕೈಬಿಟ್ಟರು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next