Advertisement

ಒಂದೇ ಕಂತಿನಲ್ಲಿ ಶಾಲಾ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗೆ ಆನ್‌ಲೈನ್ ತರಗತಿಯಿಂದ ನಕಾರ

09:37 PM Nov 13, 2020 | mahesh |

ಚಾಮರಾಜನಗರ: ಕೋವಿಡ್ ಹಿನ್ನೆಲೆಯಲ್ಲಿ ಒಂದೇ ಕಂತಿನಲ್ಲಿ ಶಾಲಾ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಕ್ಕೆ ಖಾಸಗಿ ಶಾಲೆಯ ವಿದ್ಯಾರ್ಥಿಯನ್ನು ಆನ್‌ಲೈನ್ ತರಗತಿಯಿಂದ ತೆಗೆದು ಹಾಕಿರುವ ಘಟನೆ ಶಿಕ್ಷಣ ಸಚಿವರು ಉಸ್ತುವಾರಿ ವಹಿಸಿಕೊಂಡಿರುವ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

Advertisement

ನಗರದ ಜೆಎಸ್‌ಎಸ್ ಪಬ್ಲಿಕ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಯಶಸ್ ಎಂಬ ವಿದ್ಯಾರ್ಥಿಯ ತಂದೆ, ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ಗ್ರಾಮದ ಮಹೇಶ್ ಅವರು ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್ ಅವರಿಗೆ ಶುಕ್ರವಾರ ನಗರದಲ್ಲಿ ದೂರು ಸಲ್ಲಿಸಿದ್ದಾರೆ.

ತಮ್ಮ ಮಗ ಚಾಮರಾಜನಗರದ ಖಾಸಗಿ ಜೆಎಸ್‌ಎಸ್ ಪಬ್ಲಿಕ್ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಈ ಶೈಕ್ಷಣಿಕ ವರ್ಷದ ಶುಲ್ಕವನ್ನು ಎರಡು ಕಂತುಗಳಲ್ಲಿ ಪಾವತಿಸುವುದಾಗಿ ನಾನು ಮನವಿ ಮಾಡಿದ್ದೆ. ಆದರೆ ಶಾಲೆಯ ಪ್ರಾಂಶುಪಾಲ ಉಮೇಶ್ ಅವರು ಒಂದೇ ಕಂತಿನಲ್ಲಿ ಶುಲ್ಕ ಪಾವತಿಸಬೇಕು ಎಂದು ತಿಳಿಸಿದರು. ನನಗೆ ಒಂದೇ ಕಂತಿನಲ್ಲಿ ಪಾವತಿಸಲು ಸಾಧ್ಯವಾಗಲಿಲ್ಲ. ಈ ಕಾರಣ ನನ್ನ ಮಗನನ್ನು ಆನ್‌ಲೈನ್ ತರಗತಿಯಿಂದ ವಂಚಿಸಲಾಗಿದೆ. ಆತನ ಅರ್ಧವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಆರ್‌ಟಿಐ ಕಾಯ್ದೆಯನ್ನು ಉಲ್ಲಂಘಿಸಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಉಸ್ತುವಾರಿ ಸಚಿವರು ಡಿಡಿಪಿಐ ಅವರಿಗೆ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next