Advertisement

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

04:35 PM Jul 19, 2019 | keerthan |

ಉಳ್ಳಾಲ : ಕೊಣಾಜೆ ಅಸೈಗೋಳಿ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಸವಾದ್ (23) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ದೇರಳಕಟ್ಟೆ ಆಸ್ಪತ್ರೆಯಲ್ಲಿ ಮೃತಪಟ್ಡಿದ್ದಾರೆ.

Advertisement

ಅಸೈಗೋಳಿಯ ಪುಲ್ಲು ನಿವಾಸಿ ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಸುಲೈಮಾನ್ ಪುಲ್ಲು ಅವರ ಏಕೈಕ ಪುತ್ರನಾಗಿರುವ ಮಹಮ್ಮದ್ ಸವಾದ್ ಗುರುವಾರ ರಾತ್ರಿ ಕೊಣಾಜೆ ಕಡೆಯಿಂದ ಮಂಗಳೂರು ಕಡೆ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮಂಗಳೂರು ಕಡೆಯಿಂದ ಕೊಣಾಜೆ ಕಡೆ ಸಂಚರಿಸುತ್ತಿದ್ದಾಗ ಬೈಕ್ ಹಠತ್ತಾನೆ ಅಡ್ಡ ಬಂದಾಗ ಸವಾದ್ ಬೈಕ್ ಡಿಕ್ಕಿ ಹೊಡೆದಿತ್ತು.  ಗಂಭೀರ ಗಾಯಗೊಂಡಿದ್ದ ಸವಾದ್ ನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರು.

ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಸವಾದ್ ತಾಯಿ, ತಂದೆ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next