Advertisement

ಕಾಸರಗೋಡು: ವಿದ್ಯಾರ್ಥಿನಿ ಆತ್ಮಹತ್ಯೆ; ಯುವಕನ ಬಂಧನ 

11:21 PM Nov 03, 2022 | Team Udayavani |

ಕಾಸರಗೋಡು: ಹೊಸದುರ್ಗ ಅಲಾಮಿಪಳ್ಳಿ ನಿವಾಸಿ ಕೆ.ವಿನೋದ್‌ ಕುಮಾರ್‌ ಅವರ ಪುತ್ರಿ ಕಾಲೇಜು ವಿದ್ಯಾರ್ಥಿನಿ ನಂದ ವಿನೋದಿನಿ(20) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಕಲ್ಲೂರಾವಿ ಮೌಲಕರಿಯತ್‌ ಹೌಸ್‌ನ ಎ.ಕೆ.ಅಬ್ದುಲ್‌ ಸುಹೈಬ್‌(20)ನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ.

Advertisement

ಆತ್ಮಹತ್ಯೆಗೆ ಪ್ರೇರಣೆ ನೀಡಿದ ಸೆಕ್ಷನ್‌ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಪಡನ್ನಕ್ಕಾಡ್‌ ಇ.ಕೆ.ನಾಯನಾರ್‌ ಆರ್ಟ್ಸ್ ಆ್ಯಂಡ್‌ ಸಯನ್ಸ್‌ ಕಾಲೇಜು ವಿದ್ಯಾರ್ಥಿನಿಯಾಗಿದ್ದ ನಂದ ವಿನೋದಿನಿ ಅಕ್ಟೋಬರ್‌ 31 ರಂದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೇಣು ಬಿಗಿಯುವ ಮುನ್ನ ವೀಡಿಯೋ ಕಾಲ್‌ ಮಾಡಿ ಅಬ್ದುಲ್‌ ಸುಹೈಬ್‌ಗ ತಿಳಿಸಿದ್ದಳೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಸೆಕ್ಷನ್‌ ಪ್ರಕಾರ ಪೊಲೀಸರು ಕೇಸು ದಾಖಲಿಸಿದ್ದರು. ಈತನನ್ನು ಸಮಗ್ರ ವಿಚಾರಣೆಗೊಳಪಡಿಸಿದ ಬಳಿಕ ಸುಹೈಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ರಿಮಾಂಡ್‌ ವಿಧಿಸಿದೆ. ಆತ್ಮಹತ್ಯೆ ಮಾಡಿಕೊಂಡ ನಂದ ವಿನೋದಿನಿ ಮತ್ತು ಅಬ್ದುಲ್‌ ಸುಹೈಬ್‌ನ ಮೊಬೈಲ್‌ ಫೋನ್‌ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಸಮಗ್ರವಾಗಿ ಪರಿಶೀಲಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next