Advertisement

ಕನ್ನಡ್ಕ: ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು

11:26 AM Apr 23, 2022 | Team Udayavani |

ಸುಳ್ಯಪದವು: ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕನ್ನಡ್ಕದಲ್ಲಿ ನಡೆದಿದೆ.

Advertisement

ಪಡುವನ್ನೂರು ಗ್ರಾಮದ ಕೆಳಗಿನ ಕನ್ನಡ್ಕ ನಿವಾಸಿ ಧನುಷ್ (21) ಮೃತ ಯುವಕ. ಈತ ಪುತ್ತೂರು ಸರಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಸುಳ್ಯ ಪದವು ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದು ಇತ್ತೀಚಿಗೆ ನಡೆದ ಜಾಗರಣ ವೇದಿಕೆಯ ನೂತನ ಸಮಿತಿಯಲ್ಲಿ ಯುವವಾಹಿನಿ ಸಂಘಟನೆಯ ಪದಾಧಿಕಾರಿಯಾಗಿ ಆಯ್ಕೆಯಾಗಿದ್ದರು.

ಶುಕ್ರವಾರ ರಾತ್ರಿ ಒತ್ತೆಕೋಲ ನಡೆಯುತ್ತಿದ್ದ ಪ್ರದೇಶಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿರುವಾಗ ಮನೆಯ ಸಮೀಪವಿರುವ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next