Advertisement

ಖಾಲಿ ಕೊಡಗಳೊಂದಿಗೆ ಮಕ್ಕಳ ಪ್ರತಿಭಟನೆ

11:09 AM Feb 25, 2023 | Team Udayavani |

ಮುಂಡಗೋಡ: ಕಳೆದ ಹದಿನೈದು ದಿನಗಳಿಂದ ಶಾಲೆಯಲ್ಲಿ ಕುಡಿಯುವ ನೀರು ಇಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳು ತರಗತಿ ಬಿಟ್ಟು ಖಾಲಿ ಕೊಡಗಳೊಂದಿಗೆ ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿ ಮೇಲೆ ಅರ್ಧ ಗಂಟೆಗಳ ಕಾಲ ಕುಳಿತು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಶಿಂಗನಳ್ಳಿ ಗ್ರಾಮದಲ್ಲಿ ಶುಕ್ರವಾರ ಜರುಗಿದೆ. ಕಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಂಗನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 86 ವಿದ್ಯಾರ್ಥಿಗಳಿದ್ದಾರೆ.

Advertisement

ಶಾಲೆಯಲ್ಲಿ ಕಳೆದ ಹದಿನೈದು ದಿನಗಳ ಹಿಂದೆ ನೀರಿನ ಸಮಸ್ಯೆ ಆದಾಗ ಅಲ್ಲಿಯ ಶಾಲಾ ಸಮಿತಿಯವರು ಟ್ಯಾಂಕರ್‌ ಮೂಲಕ ಶಾಲೆಗೆ ಕುಡಿಯುವ ನೀರು ಸರಬರಾಜು ಮಾಡಿದ್ದರು. ನಂತರ ಫೆ.15ರಂದು ಕಾತೂರ ಗ್ರಾಪಂಗೆ ಮನವಿ ಸಲ್ಲಿಸಿದ್ದರು. ಆದರೂ ಸಹ ಪಂಚಾಯಿತಿಯವರು ಮೌನವಹಿಸಿದ್ದರಿಂದ ಆಕ್ರೋಶಗೊಂಡ ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ಸಮಿತಿಯವರು ಜೊತೆಯಾಗಿ ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿ ಮೇಲೆ ಕುಳಿತು ಸಂಚಾರ ತಡೆ ನಡೆಸಿ ಪ್ರತಿಭಟಿಸಿದರು.

ವಿಷಯ ಗಮನಕ್ಕೆ ಬಂದ ತಕ್ಷಣವೇ ಸಿಆರ್‌ಪಿ ಮತ್ತು ಇಸಿಒಗಳನ್ನು ಕಳಿಸಿದ್ದೇನೆ. ಈ ಸಮಸ್ಯೆ ಬಗೆಹರಿದಿದೆ. ಶಾಲೆಯಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದು ಪ್ರತಿಭಟನೆ ಮಾಡಬಾರದಿತ್ತು. ಪಾಲಕರು ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದಾರೆ. ನೀರಿನ ಸಮಸ್ಯೆ ಬಗ್ಗೆ ಗ್ರಾಮಪಂಚಾಯಿತಿ ಪಿಡಿಒ ಹಾಗೂ ಸದಸ್ಯರು ಶಾಲೆಗೆ ನೀರಿನ ಸಮಸ್ಯೆ ಎದುರಾಗದಂತೆ ಸೂಕ್ತ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಲ್ಲದೇ ತಾಪಂ ಇಒ ಅವರ  ಗಮನಕ್ಕೆ ತಂದಿದ್ದೇನೆ.
ಅಕ್ಕಮಹಾದೇವಿ ಗಾಣಗೇರ, ಪ್ರಭಾರ ಬಿಇಒ ಮುಂಡಗೋಡ

ಪ್ರತಿಭಟನಾಕಾರರ ಮನವೊಲಿಕೆ: ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿಯ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅರ್ಧ ಗಂಟೆಗಳ ಕಾಲ ಎರಡು ಬದಿಯಲ್ಲಿ ವಾಹನಗಳು ಸಾಲಾಗಿ ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಸಿಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್‌ಐ ಯಲ್ಲಾಲಿಂಗ ಕುನ್ನೂರ ಪ್ರತಿಭಟನಾಕಾರರ ಮನವೊಲಿಸಿ ನೀರಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದುಹೆದ್ದಾರಿ ಮೇಲೆ ಕುಳಿತಿರುವವರನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಂತರ ಶಾಲೆಗೆ ಟ್ರಾಕ್ಟರ್‌ ಮೂಲಕ ನೀರು ಪೂರೈಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next