Advertisement

ಸರ್ವಾಧಿಕಾರಿಗಳ ವಿರುದ್ಧ ವಿದ್ಯಾರ್ಥಿ ಹೋರಾಟ ನಿರಂತರ

05:51 PM Jul 26, 2022 | Team Udayavani |

ಗಂಗಾವತಿ: ವಿಶ್ವದ ಇತಿಹಾಸ ಗಮನಿಸಿದರೆ ಸರ್ವಾಧಿಕಾರಿಗಳ ಧೋರಣೆಗಳ ವಿರುದ್ಧ ಮುಂಚೂಣಿಯಲ್ಲಿ ನಿಂತು ವಿದ್ಯಾರ್ಥಿಗಳ ಸಂಘಟನೆಗಳೇ ಹೋರಾಟ ನಡೆಸಿ ನಿರಂಕುಶ ಪ್ರಭುತ್ವಗಳನ್ನು ಕೊನೆಗಾಣಿಸಿವೆ. ಭಾರತದಲ್ಲಿ ಪ್ರಸ್ತುತ ಜನ ವಿರೋಧಿ ಪ್ಯಾಸಿಸ್ಟ್‌ ಸರಕಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಹೋರಾಟ ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ ರಾಜ್ಯಾಧ್ಯಕ್ಷ ಹತಾವುಲ್ಲಾ ಪುಂಜಲ್‌ ಕಟ್ಟೆ ಹೇಳಿದರು.

Advertisement

ಅವರು ಕರ್ನೂಲ್‌ ಬಾಬಾ ದರ್ಗಾ ಆವರಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ಸದಸ್ಯತ್ವ ಅಭಿಯಾನ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ದೇಶದ ಇತಿಹಾಸ ಗಮನಿಸಿದರೆ ಪ್ರಭುತ್ವದ ದಮನಕಾರಿ ನೀತಿಗಳ ವಿರುದ್ಧವೂ ವಿದ್ಯಾರ್ಥಿ ಮತ್ತು ಯುವ ಸಮೂಹ ಹೋರಾಟ ನಡೆಸಿ ಯಶಸ್ವಿಯಾಗಿದೆ. 2014ರಿಂದ ಸಂವಿಧಾನ ಆಶಯಗಳಿಗೆ ಮಾರಕವಾಗುವಂತಹ ಆಡಳಿತ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ಸಂವಿಧಾನ ಬದ್ಧವಾಗಿ ಜನಪರ ಹೋರಾಟ ನಡೆಸುವವರನ್ನು ಜೈಲಿನಲ್ಲಿರಿಸಲಾಗಿದೆ. ಸಂವಿಧಾನದ ಆಶಯಗಳನ್ನು ಉಳಿಸಲು ದೇಶದ ಸಮಗ್ರತೆ ಉಳಿವಿಗಾಗಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಯ ಮೂಲಕ ಕಾರ್ಯ ಮಾಡಲಾಗುತ್ತಿದೆ ಎಂದರು.

ರಾಜ್ಯ ಮುಖಂಡ ಸಫìರಾಜ್‌ ಮಾತನಾಡಿ, ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು ಶೈಕ್ಷಣಿಕವಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತ್ತೀಚೆಗೆ ಪಿಎಸ್‌ಐ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಬರೀ ಅಧಿಕಾರಿಗಳು ಬಂಧನವಾಗಿದ್ದು ಇದರಲ್ಲಿ ಪಾಲ್ಗೊಂಡಿರುವ ಜನಪ್ರತಿನಿಧಿ ಗಳನ್ನು ಬಂಧಿಸಬೇಕು. ಎಲ್ಲ ಸಮಸ್ಯೆಗಳ ಕುರಿತು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳನ್ನು ಸಂಘಟಿಸುವ ಕಾರ್ಯ ಮಾಡುತ್ತಿದೆ ಎಂದರು.

ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ ರಾಜ್ಯ ಮುಖಂಡರಾದ ಅನೀಸ್‌ ಕುಂಬ್ರಾ, ಚಾಂದ ಸಲ್ಮಾನ್‌, ನಾಸೀರಾ, ಅತೀಕುರ್‌ ರಹೆಮಾನ್‌ ಸೇರಿ ಅನೇಕರಿದ್ದರು.

Advertisement

ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ 2022-23ರ ಸದಸ್ಯತ್ವ ಅಭಿಯಾನದ ನಿಮಿತ್ತ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ರ್ಯಾಲಿ ನಡೆಸುವ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಭ್ರಷ್ಟಾಚಾರ ನಡೆದಿರುವುದು, ಪಿಎಸ್‌ಐ ಹಗರಣ ಮತ್ತು ಸಂವಿಧಾನ ಪ್ರಜಾಪ್ರಭುತ್ವ ಉಳಿಸಿ ಎಂದು ಬರೆಯಲಾಗಿದ್ದ ಪ್ಲೇ ಕಾರ್ಡ್‌ ಪ್ರದರ್ಶನಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿದಾಗ ಸಂಘಟಕರು ಮತ್ತು ಪಿಐ ಟಿ. ವೆಂಕಟಸ್ವಾಮಿ ಮಧ್ಯೆ ವಾಗ್ವಾದ ಜರುಗಿತು.

Advertisement

Udayavani is now on Telegram. Click here to join our channel and stay updated with the latest news.

Next