Advertisement

ಕಲಬುರಗಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

02:17 PM Feb 22, 2023 | Team Udayavani |

ಕಲಬುರಗಿ: ಕಲ್ಲಿನ ಖಣಿಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಗರದ ಶ್ರೀ ರಾಮತೀರ್ಥ ದೇವಸ್ಥಾನದ ಹಿಂಭಾಗದಲ್ಲಿ ನಡೆದಿದೆ.

Advertisement

ಬೀದರ್ ಮೂಲದ ಆಶೀಶ್ ಗುಪ್ತಾ (15) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

9 ನೇ ತರಗತಿ ಓದುತ್ತಿದ್ದ ಆಶೀಶ್ ಬೀದರ್ ನಿಂದ ತನ್ನ ಸ್ನೇಹಿತರೊಂದಿಗೆ ಕಲಬುರಗಿ ಪ್ರವಾಸಕ್ಕೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ.

ಕಲಬುರಗಿಯ ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ ದರ್ಶನ ಪಡೆದು ಸ್ನೇಹಿತರೊಡನೆ ಕಲ್ಲಿನ ಖಣಿಯಲ್ಲಿ ನಿಂತಿದ್ದ ನೀರಿನಲ್ಲಿ ಈಜಾಡುವಾಗ ಈ ಘಟನೆ ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಆಶೀಶ್‌ ಸಾವನಪ್ಪಿದ್ದಾನೆ.

ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಮೃತದೇಹ ಹೊರತೆಗೆದಿದ್ದಾರೆ. ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next