Advertisement

ಬಂಡಿಪೋರಾ ರೇಪ್‌ ಕೇಸ್‌ : ಕಾಶ್ಮೀರದಲ್ಲಿ ಸೇನೆ-ವಿದ್ಯಾರ್ಥಿಗಳ ಘರ್ಷಣೆ

09:53 AM May 15, 2019 | Team Udayavani |

ಶ್ರೀನಗರ : 3 ವರ್ಷದ ಬಾಲಕಿಯ ಅಪಹರಣ ಮತ್ತು ರೇಪ್‌ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೂರಾರು ವಿದ್ಯಾರ್ಥಿಗಳು ಮತ್ತು ಸೇನಾ ಪಡೆಗಳ ನಡುವೆ ಮಂಗಳವಾರ ಘರ್ಷಣೆ ನಡೆದಿದೆ.

Advertisement

ಶ್ರೀನಗರದ ಅಮರ್‌ ಸಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೇನಾಪಡೆಗಳು ಮತ್ತು ಪೊಲೀಸರು ವ್ಯಾಪಕ ಕಟ್ಟೆಚ್ಚರ ವಹಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next