Advertisement

ಸಚಿವ ಬಾಬುಲ್‌ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆ

11:35 AM Sep 20, 2019 | sudhir |

ಕೋಲ್ಕತಾ: ಪಶ್ಚಿಮ ಬಂಗಾಲದ ಜಾಧವ್‌ಪುರ ವಿಶ್ವ ವಿದ್ಯಾನಿಲಯದಲ್ಲಿ ಎಬಿವಿಪಿ ಹಮ್ಮಿಕೊಂಡಿದ್ದ ಸೆಮಿನಾರ್‌ನಲ್ಲಿ ಮಾತನಾಡಲು ಹೋಗಿದ್ದ ಕೇಂದ್ರ ಸಚಿವ ಬಾಬುಲ್‌ ಸುಪ್ರಿಯೋಗೆ ಅಲ್ಲಿನ ವಿದ್ಯಾರ್ಥಿಗಳು ಕಪ್ಪು ಬಾವುಟ ಪ್ರದರ್ಶಿಸಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಅವರ ಕೂದಲನ್ನು ಹಿಡಿದು ಎಳೆದಾಡಿದ್ದಾರೆ.

Advertisement

ವಿವಿ ಪ್ರವೇಶಕ್ಕೆ ಅವಕಾಶ ಕೊಡದ ಎಎಫ್ಎಸ್‌ಯು ಮತ್ತು ಎಸ್‌ಎಫ್ಐ ವಿದ್ಯಾರ್ಥಿಗಳು ಒಂದೂವರೆ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದಾರೆ. ಸೆಮಿನಾರ್‌ ಮುಗಿದ ಅನಂತರ ವಿವಿಯಿಂದ ಹೊರಗೆ ಹೋಗುವಾಗ ಕೂಡ ಸಂಜೆ 5 ಗಂಟೆಯ ಸುಮಾರಿಗೆ ಮತ್ತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ವಿವಿ ಉಪಕುಲಪತಿ ಸುರಂಜನ್‌ ದಾಸ್‌ ಕೂಡ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರಾದರೂ ಅವರ ಮಾತುಗಳನ್ನು ಕೇಳಿಸಿಕೊಳ್ಳಲಿಲ್ಲ. ಈ ಬಗ್ಗೆ ಮಾತನಾಡಿದ ರಾಜ್ಯಪಾಲ ಜಗದೀಪ್‌ ಧನ್‌ಕರ್‌, ಸಚಿವರಿಗೆ ಘೇರಾವ್‌ ಹಾಕಿರುವ ಪ್ರಕರಣ ಗಂಭೀರವಾದದ್ದು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next