Advertisement

ಬಸ್‌ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ

12:16 PM Nov 09, 2019 | Suhan S |

ಚನ್ನಮ್ಮ ಕಿತ್ತೂರು: ಹೊನ್ನಾಪುರ, ಉಗರಖೋಡ ಗ್ರಾಮಗಳಿಗೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕಿತ್ತೂರು ಬಸ್‌ ನಿಲ್ದಾಣದಲ್ಲಿ ಗುರುವಾರ ರಾತ್ರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

Advertisement

ತಾಲೂಕಿನ ವಿವಿಧ ಹಳ್ಳಿಗಳಿಂದ ವಿದ್ಯಾಭ್ಯಾಸಕ್ಕೆಂದು ಆಗಮಿಸುವ ವಿದ್ಯಾರ್ಥಿಗಳಿಗೆ ಹಾಗೂ ವ್ಯಾಪಾರ ವಹಿವಾಟಿಗೆ ಆಗಮಿಸುವ ಜನರಿಗೆ ಸಮರ್ಪಕ ಬಸ್‌ ಸೌಲಭ್ಯ ಇಲ್ಲದರಿಂದ ಸಮಸ್ಯೆಯಾಗುತ್ತದೆ. ಇಲ್ಲಿರುವ ಸಮಸ್ಯೆ ಕುರಿತು ಅನೇಕ ಬಾರಿ ಸಾರಿಗೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಪ್ರತಿದಿನ ಮಾರ್ಗಕ್ಕೆ ಹೊಂದಿಸಿದ ಬಸ್‌ಗಳನ್ನು ಬೈಲಹೊಂಗಲ ಡಿಪೋದಿಂದ ಬಿಡುತ್ತಿಲ್ಲ. ಒಂದು ದಿನ ಬಸ್‌ ಬಂದರೆ ಇನ್ನೊಂದು ದಿನ ಬಸ್‌ಗಾಗಿ ಪರಿದಾಡುವ ಸ್ಥಿತಿ ಇಲ್ಲಿದೆ.

ಜೊತೆಗೆ ಬಸ್‌ ಸಂಚಾರದ ಕುರಿತು ಕಿತ್ತೂರು ಬಸ್‌ ನಿಲ್ದಾಣದ ಅಧಿಕಾರಿಗಳನ್ನು ವಿಚಾರಿಸಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಅಲ್ಲದೇ ಪ್ರಯಾಣಿಕರ ಕಾಟ ಹೆಚ್ಚಾದರೆ ನಿಯಂತ್ರಣಾಧಿಕಾರಿ ಕೊಠಡಿಗೆ ಬೀಗ ಹಾಕಿ ಅಲ್ಲಿಂದ ಕಾಲ್ಕಿಳುತ್ತಾರೆ ಎಂದು ಆರೋಪಿಸಿದರು. ನಂತರ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ತೊಂದರೆ ಆಲಿಸಿ ಸಂಬಂಧ ಪಟ್ಟ ಅಧಿ ಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿ ಹೊನ್ನಾಪುರ ಗ್ರಾಮಕ್ಕೆ ಬಸ್‌ ಬಿಡುವಂತೆ ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರತಿಭಟನೆಯಲ್ಲಿ ಹೊನ್ನಾಪುರ, ಉಗರಖೋಡ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next