Advertisement

Raichur ನವೋದಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೊಡೆದಾಟ

11:38 PM Mar 31, 2024 | Team Udayavani |

ರಾಯಚೂರು: ಇಲ್ಲಿನ ನವೋದಯ ವೈದ್ಯಕೀಯ ಶಿಕ್ಷಣ ಸಂಸ್ಥೆ (ಎನ್‌ಇಟಿ)ಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಶನಿವಾರ ರಾತ್ರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

Advertisement

ತೆಲಂಗಾಣದ ನಾರಾಯಣಪೇಟೆಯ ಮಾಜಿ ಶಾಸಕ ಎಸ್‌.ಆರ್‌.ರೆಡ್ಡಿ ನೇತೃತ್ವದ ಎನ್‌ಇಟಿ ಸಂಚಾಲಿತ ನವೋದಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ವಸತಿ ನಿಲಯ-5ರಲ್ಲಿ ಎರಡು ಗುಂಪುಗಳ ನಡುವೆ ಜಗಳವಾಗಿದ್ದು, ವಿದ್ಯಾರ್ಥಿಗಳು ಬೆತ್ತ, ಬಡಿಗೆ, ದೊಣ್ಣೆ ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಓರ್ವನಿಗೆ ತೀವ್ರ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಪೊಲೀಸ್‌ ದೂರು ದಾಖಲಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next